<p><strong>ಬೆಂಗಳೂರು</strong>: ಮಳೆಗೆ ರಸ್ತೆ ಕುಸಿದ ಕಾರಣ ಮುಚ್ಚಲಾಗಿರುವ ಬೋರ್ ಬ್ಯಾಂಕ್ ರಸ್ತೆಯು ಮೂರು ದಿನಗಳಲ್ಲಿ ಸಂಚಾರಕ್ಕೆ ತೆರೆದುಕೊಳ್ಳಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾಳೇನ ಅಗ್ರಹಾರ–ನಾಗವಾರವನ್ನು ಸಂಪರ್ಕಿಸುವ ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗದಲ್ಲಿ ಪಾಟರಿ ಟೌನ್ ಮೆಟ್ರೊ ನಿಲ್ದಾಣ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಡೆಗೋಡೆ ಬುಧವಾರ ಮಳೆಗೆ ಕುಸಿದು ಬಿದ್ದಿತ್ತು. ಜೊತೆಗೆ ಬೋರ್ ಬ್ಯಾಂಕ್ ರಸ್ತೆಯ ಮಧ್ಯದಲ್ಲಿಯೇ ಕುಸಿದು 5 ಅಡಿಗಿಂತಲೂ ಆಳವಾದ ಗುಂಡಿ ಬಿದ್ದಿತ್ತು. ಬೋರ್ ಬ್ಯಾಂಕ್ ರಸ್ತೆ ಸಂಚಾರವನ್ನು ಮುಚ್ಚಿ, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮಾಡಲಾಗಿತ್ತು. </p>.<p>‘ಒಂದು ಕಡೆಯಿಂದ ಪಾಟರಿ ಟೌನ್ ಮೆಟ್ರೊ ನಿಲ್ದಾಣಕ್ಕಾಗಿ ಕಾಮಗಾರಿ ನಡೆಯುತ್ತಿತ್ತು. ಇನ್ನೊಂದು ಕಡೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇರಲಿಲ್ಲ. ಇದರಿಂದ ರಸ್ತೆಯಲ್ಲಿಯೇ ನೀರು ನಿಂತು ಮಣ್ಣು ಕುಸಿದಿದೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಗುಂಡಿ ತುಂಬುವ ಕೆಲಸ ಆಗಿದೆ. ಇನ್ನೆರಡು ದಿನಗಳಲ್ಲಿ ರಸ್ತೆ ಸರಿಯಾಗಲಿದೆ. ಆನಂತರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಳೆಗೆ ರಸ್ತೆ ಕುಸಿದ ಕಾರಣ ಮುಚ್ಚಲಾಗಿರುವ ಬೋರ್ ಬ್ಯಾಂಕ್ ರಸ್ತೆಯು ಮೂರು ದಿನಗಳಲ್ಲಿ ಸಂಚಾರಕ್ಕೆ ತೆರೆದುಕೊಳ್ಳಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾಳೇನ ಅಗ್ರಹಾರ–ನಾಗವಾರವನ್ನು ಸಂಪರ್ಕಿಸುವ ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗದಲ್ಲಿ ಪಾಟರಿ ಟೌನ್ ಮೆಟ್ರೊ ನಿಲ್ದಾಣ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಡೆಗೋಡೆ ಬುಧವಾರ ಮಳೆಗೆ ಕುಸಿದು ಬಿದ್ದಿತ್ತು. ಜೊತೆಗೆ ಬೋರ್ ಬ್ಯಾಂಕ್ ರಸ್ತೆಯ ಮಧ್ಯದಲ್ಲಿಯೇ ಕುಸಿದು 5 ಅಡಿಗಿಂತಲೂ ಆಳವಾದ ಗುಂಡಿ ಬಿದ್ದಿತ್ತು. ಬೋರ್ ಬ್ಯಾಂಕ್ ರಸ್ತೆ ಸಂಚಾರವನ್ನು ಮುಚ್ಚಿ, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮಾಡಲಾಗಿತ್ತು. </p>.<p>‘ಒಂದು ಕಡೆಯಿಂದ ಪಾಟರಿ ಟೌನ್ ಮೆಟ್ರೊ ನಿಲ್ದಾಣಕ್ಕಾಗಿ ಕಾಮಗಾರಿ ನಡೆಯುತ್ತಿತ್ತು. ಇನ್ನೊಂದು ಕಡೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇರಲಿಲ್ಲ. ಇದರಿಂದ ರಸ್ತೆಯಲ್ಲಿಯೇ ನೀರು ನಿಂತು ಮಣ್ಣು ಕುಸಿದಿದೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಗುಂಡಿ ತುಂಬುವ ಕೆಲಸ ಆಗಿದೆ. ಇನ್ನೆರಡು ದಿನಗಳಲ್ಲಿ ರಸ್ತೆ ಸರಿಯಾಗಲಿದೆ. ಆನಂತರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>