ಬೆಂಗಳೂರು: ‘ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟುಹೋಗಿರುವ ವೆಂಟಿಲೇಟರ್ಗಳನ್ನು ಬಾಷ್ ಕಂಪನಿ ಉಚಿತವಾಗಿ ದುರಸ್ತಿ ಮಾಡಿಕೊಡಲಿದೆ’ ಎಂದು ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
‘ಬಾಷ್ ಕಂಪನಿಯ ಉಪಾಧ್ಯಕ್ಷ ರಮೇಶ್ ಸಾಲಿಗ್ರಾಮ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಾಗಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಸಿ ಸರ್ಕಾರಿ ಆಸ್ಪತ್ರೆಗಳ ವೆಂಟಿಲೇಟರ್ಗಳನ್ನು ದುರಸ್ತಿ ಮಾಡಿಕೊಡಲು ಬಾಷ್ ಕಂಪನಿ ಆಸಕ್ತಿ ತೋರಿಸಿದೆ’ ಎಂದು ಹೇಳಿದರು.