<p><strong>ಬೆಂಗಳೂರು:</strong> ‘ಬೌನ್ಸ್’ ಕಂಪನಿಯ ಬಾಡಿಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರದಲ್ಲಿ ನಡೆದಿದೆ.</p>.<p>‘ಕೆ.ಆರ್.ಪುರದ ಶ್ರೀನಿವಾಸ್ ಲೇಔಟ್ ನಿವಾಸಿ ಲೀಲಾವತಿ ಹೆಬ್ಬಾರ್ ಎಂಬುವರ 40 ಗ್ರಾಂ ತೂಕದ ಸರವನ್ನು ಕದ್ದೊಯ್ಯಲಾಗಿದ್ದು, ಈ ಸಂಬಂಧ ಪತಿ ಸುಬ್ರಹ್ಮಣ್ಯ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಕೆ.ಆರ್.ಪುರ ಪೊಲೀಸರು ಹೇಳಿದರು.</p>.<p>‘ಇದೇ 10ರಂದು ಬೆಳಿಗ್ಗೆ 11.45ರ ಸುಮಾರಿಗೆ ಲೀಲಾವತಿ ಅವರು ಮನೆಯಿಂದ ಹೊರಗಡೆ ಬಂದಿದ್ದರು. ಅದೇ ಸಂದರ್ಭದಲ್ಲೇ ಬೌನ್ಸ್ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ಲೀಲಾವತಿ ಅವರ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು. ಅದು ವಿಫಲವಾಗಿತ್ತು.’</p>.<p>‘ಲೀಲಾವತಿ ಸಹಾಯಕ್ಕಾಗಿ ಕೂಗಾಡುತ್ತಿದ್ದಾಗಲೇ ಆರೋಪಿಗಳು ಅವರ ತಲೆಗೆ ಹೊಡೆದಿದ್ದರು. ಅಸ್ವಸ್ಥಗೊಂಡು ಸ್ಥಳದಲ್ಲೇ ಕುಸಿದು ಬೀಳುತ್ತಿದ್ದಂತೆ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೌನ್ಸ್’ ಕಂಪನಿಯ ಬಾಡಿಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯೊಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರದಲ್ಲಿ ನಡೆದಿದೆ.</p>.<p>‘ಕೆ.ಆರ್.ಪುರದ ಶ್ರೀನಿವಾಸ್ ಲೇಔಟ್ ನಿವಾಸಿ ಲೀಲಾವತಿ ಹೆಬ್ಬಾರ್ ಎಂಬುವರ 40 ಗ್ರಾಂ ತೂಕದ ಸರವನ್ನು ಕದ್ದೊಯ್ಯಲಾಗಿದ್ದು, ಈ ಸಂಬಂಧ ಪತಿ ಸುಬ್ರಹ್ಮಣ್ಯ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಕೆ.ಆರ್.ಪುರ ಪೊಲೀಸರು ಹೇಳಿದರು.</p>.<p>‘ಇದೇ 10ರಂದು ಬೆಳಿಗ್ಗೆ 11.45ರ ಸುಮಾರಿಗೆ ಲೀಲಾವತಿ ಅವರು ಮನೆಯಿಂದ ಹೊರಗಡೆ ಬಂದಿದ್ದರು. ಅದೇ ಸಂದರ್ಭದಲ್ಲೇ ಬೌನ್ಸ್ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ದುಷ್ಕರ್ಮಿಗಳು, ಲೀಲಾವತಿ ಅವರ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು. ಅದು ವಿಫಲವಾಗಿತ್ತು.’</p>.<p>‘ಲೀಲಾವತಿ ಸಹಾಯಕ್ಕಾಗಿ ಕೂಗಾಡುತ್ತಿದ್ದಾಗಲೇ ಆರೋಪಿಗಳು ಅವರ ತಲೆಗೆ ಹೊಡೆದಿದ್ದರು. ಅಸ್ವಸ್ಥಗೊಂಡು ಸ್ಥಳದಲ್ಲೇ ಕುಸಿದು ಬೀಳುತ್ತಿದ್ದಂತೆ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>