<p><strong>ಬೆಂಗಳೂರು:</strong> ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದ ಪ್ರಕರಣದಲ್ಲಿ ಆರೋಗ್ಯ ಇಲಾಖೆಯು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. </p>.<p>ಏ.29ರಂದು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿದು ಬಾಲಕಿ ಸೇರಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಗೋಡೆಯನ್ನು ಆರೋಗ್ಯ ಇಲಾಖೆಯಿಂದ ನಿರ್ಮಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಬೌರಿಂಗ್ ಆಸ್ಪತ್ರೆಯಲ್ಲಿ 500 ಹಾಸಿಗೆಗಳ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಉಸ್ತುವಾರಿಯನ್ನು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. </p>.<p>ಈ ಎಂಜಿನಿಯರ್ಗಳು ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಟ್ಟಡಗಳು ಮತ್ತು ಕಾಂಪೌಂಡ್ಗಳ ಸುಸ್ಥಿರತೆ, ಸುಭದ್ರತೆ, ಸಾಮರ್ಥ್ಯ ಹಾಗೂ ನ್ಯೂನ್ಯತೆಯನ್ನು ಮೇಲ್ವಿಚಾರಣೆ ಮಾಡುವುದು ಎಂಜಿನಿಯರ್ಗಳ ಕರ್ತವ್ಯವಾಗಿದೆ. ಈ ಕರ್ತವ್ಯದಲ್ಲಿ ಲೋಪ ಎಸಗಿರುವುದು ಕಂಡುಬಂದಿರುವುದರಿಂದ ನಾಗರಾಜ್ ಅವರ ವಿರುದ್ಧ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದ ಪ್ರಕರಣದಲ್ಲಿ ಆರೋಗ್ಯ ಇಲಾಖೆಯು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. </p>.<p>ಏ.29ರಂದು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿದು ಬಾಲಕಿ ಸೇರಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಗೋಡೆಯನ್ನು ಆರೋಗ್ಯ ಇಲಾಖೆಯಿಂದ ನಿರ್ಮಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಬೌರಿಂಗ್ ಆಸ್ಪತ್ರೆಯಲ್ಲಿ 500 ಹಾಸಿಗೆಗಳ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಯ ಉಸ್ತುವಾರಿಯನ್ನು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. </p>.<p>ಈ ಎಂಜಿನಿಯರ್ಗಳು ಆರೋಗ್ಯ ಇಲಾಖೆಯ ಎಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಟ್ಟಡಗಳು ಮತ್ತು ಕಾಂಪೌಂಡ್ಗಳ ಸುಸ್ಥಿರತೆ, ಸುಭದ್ರತೆ, ಸಾಮರ್ಥ್ಯ ಹಾಗೂ ನ್ಯೂನ್ಯತೆಯನ್ನು ಮೇಲ್ವಿಚಾರಣೆ ಮಾಡುವುದು ಎಂಜಿನಿಯರ್ಗಳ ಕರ್ತವ್ಯವಾಗಿದೆ. ಈ ಕರ್ತವ್ಯದಲ್ಲಿ ಲೋಪ ಎಸಗಿರುವುದು ಕಂಡುಬಂದಿರುವುದರಿಂದ ನಾಗರಾಜ್ ಅವರ ವಿರುದ್ಧ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>