ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪ್‌ನಲ್ಲಿ ಬಿದ್ದು ಬಾಲಕ ಸಾವು

Last Updated 20 ಸೆಪ್ಟೆಂಬರ್ 2019, 20:18 IST
ಅಕ್ಷರ ಗಾತ್ರ

ಬೆಂಗಳೂರು: ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಏಳು ವರ್ಷದ ಬಾಲಕ ಭಾಸ್ಕರ್ ಎಂಬಾತ ಮೃತಪಟ್ಟಿದ್ದಾನೆ.

ಮೃತ ಬಾಲಕ, ಯಾದಗಿರಿಯ ಸಿದ್ದಪ್ಪ ಹಾಗೂ ಶಂಕ್ರಮ್ಮ ಎಂಬುವರ ಮಗ. ದಂಪತಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು.

‘ಗುರುವಾರ ಮಧ್ಯಾಹ್ನ ಸ್ನೇಹಿತರ ಜೊತೆ ಆಟವಾಡಲು ಹೋಗಿದ್ದ ಬಾಲಕ, ಮನೆಗೆ ವಾಪಸು ಬಂದಿರಲಿಲ್ಲ. ಗಾಬರಿಗೊಂಡ ಪೋಷಕರು, ಎಲ್ಲ ಕಡೆ ಹುಡುಕಿದರೂ ಸುಳಿವು ಸಿಕ್ಕಿರಲಿಲ್ಲ. ಸಂಜೆ ಅನುಮಾನಗೊಂಡು ನೀರಿನ ಸಂಪಿನಲ್ಲಿ ನೋಡಿದಾಗ ಮೃತದೇಹ ಕಂಡಿತ್ತು’ ಎಂದು ಪೊಲೀಸರು ಹೇಳಿದರು.

ಮಾಲೀಕ ಹಾಗೂ ಗುತ್ತಿಗೆದಾರನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT