<p><strong>ಬೆಂಗಳೂರು: </strong>ನಾಗವಾರ ಬಳಿಯ ಸಾರಾಯಿಪಾಳ್ಯದಲ್ಲಿ ಮಂಗಳವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಸಲ್ಮಾನ್ ಖಾನ್ (11) ಎಂಬಾತ ದುರ್ಮರಣಕ್ಕೀಡಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು, ನೀರಿನ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.</p>.<p>‘ಆಟೊ ಚಾಲಕ ಅಮ್ಜದ್ ಎಂಬುವರ ಮಗನಾಗಿದ್ದ ಸಲ್ಮಾನ್, ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ. ಮಂಗಳವಾರ ಮಧ್ಯಾಹ್ನ ಶಾಲೆಯಿಂದ ಮನೆಗೆ ಬಂದು, ಸಂಬಂಧಿಕರೊಬ್ಬರಿಗೆ ಊಟ ನೀಡಲು ಸೈಕಲ್ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಅತೀ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ್ದ ಚಾಲಕ, ಸಲ್ಮಾನ್ ತೆರಳುತ್ತಿದ್ದ ಸೈಕಲ್ಗೆ ಡಿಕ್ಕಿ ಹೊಡೆಸಿದ್ದ. ತೀವ್ರ ಗಾಯಗೊಂಡ ಸಲ್ಮಾನ್ ಸ್ಥಳದಲ್ಲೇ ಮೃತಪಟ್ಟ. ಟ್ರ್ಯಾಕ್ಟರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ’ ಎಂದರು.</p>.<p>‘ಪ್ರತಿಭಟನೆ ನಡೆಸಿದ ಸ್ಥಳೀಯರು, ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿದರು. ಟ್ರ್ಯಾಕ್ಟರ್ ಹೊತ್ತಿ ಉರಿಯಿತು.</p>.<p class="Subhead">ಹಲವು ಬಾರಿ ಎಚ್ಚರಿಕೆ: ‘ಸ್ಥಳೀಯ ನಿವಾಸಿಯೇ ಆದ ಚಾಲಕ ಟ್ರ್ಯಾಕ್ಟರ್ ಅನ್ನು ಹಲವು ದಿನಗಳಿಂದ ವೇಗವಾಗಿ ಓಡಿಸುತ್ತಿದ್ದ. ಮಕ್ಕಳು ಹಾಗೂ ವೃದ್ಧರು ಓಡಾಡುವ ರಸ್ತೆಯಲ್ಲಿ ನಿಧಾನವಾಗಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುವಂತೆ ಆತನಿಗೆ ಎಚ್ಚರಿಕೆ ನೀಡಲಾಗಿತ್ತು’ ಎಂದು ಸ್ಥಳೀಯರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಾಗವಾರ ಬಳಿಯ ಸಾರಾಯಿಪಾಳ್ಯದಲ್ಲಿ ಮಂಗಳವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಸಲ್ಮಾನ್ ಖಾನ್ (11) ಎಂಬಾತ ದುರ್ಮರಣಕ್ಕೀಡಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು, ನೀರಿನ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.</p>.<p>‘ಆಟೊ ಚಾಲಕ ಅಮ್ಜದ್ ಎಂಬುವರ ಮಗನಾಗಿದ್ದ ಸಲ್ಮಾನ್, ಖಾಸಗಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ. ಮಂಗಳವಾರ ಮಧ್ಯಾಹ್ನ ಶಾಲೆಯಿಂದ ಮನೆಗೆ ಬಂದು, ಸಂಬಂಧಿಕರೊಬ್ಬರಿಗೆ ಊಟ ನೀಡಲು ಸೈಕಲ್ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಅತೀ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ್ದ ಚಾಲಕ, ಸಲ್ಮಾನ್ ತೆರಳುತ್ತಿದ್ದ ಸೈಕಲ್ಗೆ ಡಿಕ್ಕಿ ಹೊಡೆಸಿದ್ದ. ತೀವ್ರ ಗಾಯಗೊಂಡ ಸಲ್ಮಾನ್ ಸ್ಥಳದಲ್ಲೇ ಮೃತಪಟ್ಟ. ಟ್ರ್ಯಾಕ್ಟರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ’ ಎಂದರು.</p>.<p>‘ಪ್ರತಿಭಟನೆ ನಡೆಸಿದ ಸ್ಥಳೀಯರು, ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿದರು. ಟ್ರ್ಯಾಕ್ಟರ್ ಹೊತ್ತಿ ಉರಿಯಿತು.</p>.<p class="Subhead">ಹಲವು ಬಾರಿ ಎಚ್ಚರಿಕೆ: ‘ಸ್ಥಳೀಯ ನಿವಾಸಿಯೇ ಆದ ಚಾಲಕ ಟ್ರ್ಯಾಕ್ಟರ್ ಅನ್ನು ಹಲವು ದಿನಗಳಿಂದ ವೇಗವಾಗಿ ಓಡಿಸುತ್ತಿದ್ದ. ಮಕ್ಕಳು ಹಾಗೂ ವೃದ್ಧರು ಓಡಾಡುವ ರಸ್ತೆಯಲ್ಲಿ ನಿಧಾನವಾಗಿ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುವಂತೆ ಆತನಿಗೆ ಎಚ್ಚರಿಕೆ ನೀಡಲಾಗಿತ್ತು’ ಎಂದು ಸ್ಥಳೀಯರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>