‘ನೇಪಾಳದಿಂದ ನಗರಕ್ಕೆ ನಾಲ್ಕು ವರ್ಷಗಳ ಹಿಂದೆ ಯೋಗಿಮಾನ್ ಬಹದ್ದೂರ್ ಖಾಡ್ಕಾ ದಂಪತಿ ಬಂದಿದ್ದರು. ದಂಪತಿ ದೇವಸಂದ್ರದಲ್ಲಿ ಬಾಡಿಗೆ ಮನೆ ಪಡೆದು ನೆಲೆಸಿದ್ದರು. ಸೋಮವಾರ ಯೋಗಿಮಾನ್ ಬಹದ್ದೂರ್ ಕೂಲಿ ಕೆಲಸಕ್ಕೆ ತೆರಳಿದ್ದರು. ತಾಯಿ ಮನೆಯಲ್ಲೇ ಇದ್ದರು. ಸಂಜೆ 5.45ರ ಸುಮಾರಿಗೆ ತಾಯಿ ಮಗುವನ್ನು ಮನೆಯಲ್ಲೇ ಬಿಟ್ಟು ಅಂಗಡಿಗೆ ತೆರಳಿದ್ದರು. ಆಗ ಮಗು ಮನೆಯ ಹಿಂಭಾಗದಲ್ಲಿ ತೆರೆದಿದ್ದ ನೀರಿನ ಸಂಪ್ಗೆ ಬಿದ್ದು ಮೃತಪಟ್ಟಿದೆ’ ಎಂದು ಪೊಲೀಸರು ಹೇಳಿದರು.