<p><strong>ಬೆಂಗಳೂರು</strong>: ’ಬ್ರಾಹ್ಮಣರನ್ನು ಸೇವಾ ಮನೋಭಾವದ ಕಾರಣದಿಂದ ತ್ಯಾಗಮಯಿಗಳು ಎಂದು ಗುರುತಿಸಿದರೂ, ಸಮಾಜದ ಸಂಘಟನೆ ವಿಚಾರದಲ್ಲಿ ಒಗ್ಗಟ್ಟು ಮೂಡಿಸುವ ಕೆಲಸ ಆಗಬೇಕಾಗಿದೆ’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸಲಹೆ ನೀಡಿದರು.</p>.<p>ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಭಾನುವಾರ ಗಾಯನ ಸಮಾಜದಲ್ಲಿ ಆಯೋಜಿಸಿದ್ದ ವಿಪ್ರೋತ್ಸವ–2026 ಹಾಗೂ ಭಾರ್ಗವ ಭೂಷಣ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಗ್ಗಟ್ಟಿನಿಂದ ಮಾತ್ರ ಯಾವುದೇ ಸಂಘಟನೆಯಲ್ಲಿ ಬಲ ಇರಲಿದೆ. ಇದು ಬ್ರಾಹ್ಮಣರಿಗೂ ಅನ್ವಯಿಸಲಿದೆ. ಸರ್ವಾಂ ಗೀಣ ಬೆಳವಣಿಗೆಯ ದೃಷ್ಟಿಯಿಂದ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಸಂಘಟಿತರಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಎಷ್ಟೇ ಕಷ್ಟಗಳಿದ್ದರೂ ಸಮುದಾಯದವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಅನಿವಾರ್ಯ. ಜತೆಗೆ ಮುಖ್ಯವಾಗಿ ಮನೆಯಲ್ಲಿ ಸುಮ್ಮನೇ ಕೂರದಂತೆ ನೋಡಿಕೊಳ್ಳಿ. ಮಕ್ಕಳ ಕೌಶಲ ವೃದ್ದಿಸಿ ಉದ್ಯೋಗಸ್ಥರನ್ನಾಗಿ ಮಾಡಲು ಪಣತೊಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ’ಬ್ರಾಹ್ಮಣರನ್ನು ಸೇವಾ ಮನೋಭಾವದ ಕಾರಣದಿಂದ ತ್ಯಾಗಮಯಿಗಳು ಎಂದು ಗುರುತಿಸಿದರೂ, ಸಮಾಜದ ಸಂಘಟನೆ ವಿಚಾರದಲ್ಲಿ ಒಗ್ಗಟ್ಟು ಮೂಡಿಸುವ ಕೆಲಸ ಆಗಬೇಕಾಗಿದೆ’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸಲಹೆ ನೀಡಿದರು.</p>.<p>ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಭಾನುವಾರ ಗಾಯನ ಸಮಾಜದಲ್ಲಿ ಆಯೋಜಿಸಿದ್ದ ವಿಪ್ರೋತ್ಸವ–2026 ಹಾಗೂ ಭಾರ್ಗವ ಭೂಷಣ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಗ್ಗಟ್ಟಿನಿಂದ ಮಾತ್ರ ಯಾವುದೇ ಸಂಘಟನೆಯಲ್ಲಿ ಬಲ ಇರಲಿದೆ. ಇದು ಬ್ರಾಹ್ಮಣರಿಗೂ ಅನ್ವಯಿಸಲಿದೆ. ಸರ್ವಾಂ ಗೀಣ ಬೆಳವಣಿಗೆಯ ದೃಷ್ಟಿಯಿಂದ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಸಂಘಟಿತರಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಎಷ್ಟೇ ಕಷ್ಟಗಳಿದ್ದರೂ ಸಮುದಾಯದವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಅನಿವಾರ್ಯ. ಜತೆಗೆ ಮುಖ್ಯವಾಗಿ ಮನೆಯಲ್ಲಿ ಸುಮ್ಮನೇ ಕೂರದಂತೆ ನೋಡಿಕೊಳ್ಳಿ. ಮಕ್ಕಳ ಕೌಶಲ ವೃದ್ದಿಸಿ ಉದ್ಯೋಗಸ್ಥರನ್ನಾಗಿ ಮಾಡಲು ಪಣತೊಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>