ದೇವಾಲಯದಲ್ಲಿ ಬಗೆ ಬಗೆಯ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ನಾಲ್ಕನೇ ಶ್ರಾವಣ ಶನಿವಾರ ಪ್ರಯುಕ್ತ ಹಮ್ಮಿಕೊಂಡಿದ್ದ ಬ್ರಹ್ಮರಥೋತ್ಸವದಲ್ಲಿ ಎ.ನಾರಾಯಣಪುರ, ಟಿನ್ ಪ್ಯಾಕ್ಟರಿ, ಪೈಲೇಔಟ್, ಅಕಾಶ್ ಬಡಾವಣೆ, ಜ್ಯೋತಿಪುರ ಮುಂತಾದ ವಿವಿಧ ಪ್ರದೇಶಗಳಿಂದ ಆಗಮಿಸಿದ ನೂರಾರು ಭಕ್ತರು ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ರಥಕ್ಕೆ ಬಾಳೆಹಣ್ಣು ಎಸೆಯುವ ಮೂಲಕ ಧನ್ಯತಾಭಾವ ಮೆರೆದರು.