ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಿವಾಸಿಯಾದ ಅವರು, ಡಿ.16ರಂದು ಅಪಘಾತಕ್ಕೆ ಒಳಗಾಗಿದ್ದರು. ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಿ, ಅದೇ ದಿನ ಸಂಜೆ ಯಶವಂತಪುರದ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನ ಜೀವರಕ್ಷಕ ಸಾಧನದ ನೆರವಿನಿಂದ ಬದುಕಿದ್ದರು. ಡಿ.19ರಂದು ಅವರ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ಘೋಷಿಸಲಾಯಿತು.