ಬೆಂಗಳೂರು: ದೊಡ್ಡಬಳ್ಳಾಪುರ ಸಮೀಪ ಈಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ಬಿದ್ದ ಗಂಭೀರ ಪೆಟ್ಟಿನಿಂದ ಮಿದುಳು ನಿಷ್ಕ್ರಿಯಗೊಂಡ ಯುವಕ ಸುಜನ್ (21 ವರ್ಷ) ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ.
ಜ.17ರಂದು ದೊಡ್ಡಬಳ್ಳಾಪುರ ಬಳಿ ಬೈಕ್ನಿಂದ ಬಿದ್ದು, ಸಮೀಪದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರವಾನಿಸಲಾಯಿತು. ಕೋಮಾದಲ್ಲಿದ್ದ ಅವರು, ಗುರುವಾರ ಮಿದುಳು ನಿಷ್ಕ್ರಿಯಗೊಂಡಿತ್ತು. ಹಾಗಾಗಿ ಪೋಷಕರು ಅವರರ ಅಂಗಾಂಗ ದಾನ ಮಾಡಲು ನಿರ್ಧರಿಸಿದರು.
ಕರ್ನಾಟಕದ ಕಸಿ ಪ್ರಾಧಿಕಾರದ ‘ಜೀವನ ಸಾರ್ಥಕತೆ’ ಯೋಜನೆಯಡಿ ಒಂದು ಮೂತ್ರಪಿಂಡವನ್ನು ಅದೇ ಆಸ್ಪತ್ರೆಯ ರೋಗಿಯೊಬ್ಬರಿಗೆ ಕಸಿ ಮಾಡಲಾಗಿದೆ. ಮತ್ತೊಂದು ಮೂತ್ರಪಿಂಡ ಹಾಗೂಯಕೃತ್ತನ್ನು ಸಕ್ರ ಆಸ್ಪತ್ರೆಯ ರೋಗಿಗೆ ಕಸಿ ಮಾಡಲಾಗಿದೆ. ಎರಡು ಕಾರ್ನಿಯಾಗಳನ್ನು ಮಿಂಟೊ ಕಣ್ಣಿನ ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.