<p><strong>ಬೆಂಗಳೂರು:</strong> ‘ಬ್ರ್ಯಾಂಡ್ ಬೆಂಗಳೂರು’ ಯೋಜನೆ ಅಡಿ ಬಿಬಿಎಂಪಿ ಆರೋಗ್ಯ ಇಲಾಖೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.</p>.<p>ಬಿಬಿಎಂಪಿಯ ಈಗಿರುವ 13 ಹೆರಿಗೆ ಆಸ್ಪತ್ರೆಗಳನ್ನು 30 ಹಾಸಿಗೆಗಳ ಮತ್ತು 5 ಆಸ್ಪತ್ರೆಗಳನ್ನು 50 ಹಾಸಿಗೆಗಳ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಅಲ್ಲದೇ, ಮೂರು ಆಸ್ಪತ್ರೆಗಳ ಹಳೆಯ ಕಟ್ಟಡಗಳನ್ನು ಹೊಸ ಕಟ್ಟಡಗಳ ನಿರ್ಮಾಣ ಮಾಡಲಾಗುವುದ. ಒಟ್ಟು ಹಾಸಿಗೆಗಳ ಸಂಖ್ಯೆಯನ್ನು 852ರಿಂದ 1,122ಕ್ಕೆ ಹೆಚ್ಚಿಸಲಾಗುವುದು ಎಂದರು.</p>.<p>ಅಲ್ಲದೇ, 26 ದಂತ ಚಿಕಿತ್ಸಾಲಯಗಳು, ಏಳು ಫಿಜಿಯೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇವುಗಳು ಸುಸಜ್ಜಿತ ವೈದ್ಯಕೀಯ ಉಪಕರಣಗಳನ್ನು ಹೊಂದಿರಲಿವೆ. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿನ ನಾಗರಿಕರಿಗೆ ಹೆಚ್ಚುವರಿ ಉಪಯುಕ್ತ ಆರೋಗ್ಯ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ ₹413.71 ಕೋಟಿ ವೆಚ್ಚ ಮಾಡುವ ಕ್ರಿಯಾ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.</p>.<p><strong>ಮನೆಗಳ ನಿರ್ಮಾಣ:</strong></p>.<p>ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸ್ಥಗಿತಗೊಳಿಸಿದ್ದ 61,894 ಮನೆಗಳ ನಿರ್ಮಾಣ ಯೋಜನೆಯನ್ನು ಮತ್ತೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ₹2,643 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಪಾಟೀಲ ತಿಳಿಸಿದರು.</p>.<p><strong>ಆನಂದರಾವ್ ವೃತ್ತದಲ್ಲಿ ಅವಳಿ ಗೋಪುರ</strong></p><p>ಆನಂದರಾವ್ ವೃತ್ತದಲ್ಲಿರುವ ಎನ್.ಎಚ್.ಕಾಂಪೌಂಡ್ ಆವರಣದಲ್ಲಿರುವ 8.78 ಎಕರೆ ವಿಸ್ತೀರ್ಣ ನಿವೇಶನ ಲೋಕೋಪಯೋಗಿ ಇಲಾಖೆ ವಶಕ್ಕೆ ಪಡೆದು ಅವಳಿ ಗೋಪುರ ನಿರ್ಮಾಣ ಯೋಜನೆ ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ.</p><p>ಇದಕ್ಕಾಗಿ ಆರ್ಥಿಕ ಹೂಡಿಕೆಗೆ ವ್ಯವಹಾರ ಸಲಹೆ ಗಾರರನ್ನು ನೇಮಕ ಮಾಡಿ ಮತ್ತೊಮ್ಮೆ ಸಚಿವ ಸಂಪುಟದ ಮುಂದೆ ಪ್ರಸ್ತಾವ ಮಂಡಿಸಲು ಸಂಪುಟ ಸಭೆ ನಿರ್ಣಯಿಸಿದೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.</p><p><strong>ಜಾತಿವಾರು ಜನಗಣತಿ ವರದಿ ಮೇಲಿನ ಚರ್ಚೆ ಮುಂದೂಡಿಕೆ</strong></p><p>ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನಗಣತಿ) ವರದಿ ಕುರಿತ ವಿಷಯ ಸಭೆಯ ಕಾರ್ಯಸೂಚಿಯಲ್ಲಿದ್ದರೂ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಿಲ್ಲ. ಆಡಳಿತಾತ್ಮಕ ಕಾರಣಕ್ಕಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು ಎಂದು ಎಚ್.ಕೆ.ಪಾಟೀಲ ಹೇಳಿದರು.</p><p>ಸಚಿವ ಸಂಪುಟದ ಮುಂದಿನ ಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಮುಂದೂಡಿಕೆಗೆ ರಾಜಕೀಯ ಕಾರಣಗಳಿಲ್ಲ. ಸಂಪುಟ ಸಭೆಗೂ ಒಂದು– ಅಥವಾ ಎರಡು ಗಂಟೆಗೂ ಮುನ್ನ ಮುಚ್ಚಿದ ಲಕೋಟೆಯಲ್ಲಿರುವ ವರದಿಯನ್ನು ತೆರೆಯಬೇಕು. ಆ ಬಳಿಕ ಚರ್ಚೆ ಆಗಬೇಕು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬ್ರ್ಯಾಂಡ್ ಬೆಂಗಳೂರು’ ಯೋಜನೆ ಅಡಿ ಬಿಬಿಎಂಪಿ ಆರೋಗ್ಯ ಇಲಾಖೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.</p>.<p>ಬಿಬಿಎಂಪಿಯ ಈಗಿರುವ 13 ಹೆರಿಗೆ ಆಸ್ಪತ್ರೆಗಳನ್ನು 30 ಹಾಸಿಗೆಗಳ ಮತ್ತು 5 ಆಸ್ಪತ್ರೆಗಳನ್ನು 50 ಹಾಸಿಗೆಗಳ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಅಲ್ಲದೇ, ಮೂರು ಆಸ್ಪತ್ರೆಗಳ ಹಳೆಯ ಕಟ್ಟಡಗಳನ್ನು ಹೊಸ ಕಟ್ಟಡಗಳ ನಿರ್ಮಾಣ ಮಾಡಲಾಗುವುದ. ಒಟ್ಟು ಹಾಸಿಗೆಗಳ ಸಂಖ್ಯೆಯನ್ನು 852ರಿಂದ 1,122ಕ್ಕೆ ಹೆಚ್ಚಿಸಲಾಗುವುದು ಎಂದರು.</p>.<p>ಅಲ್ಲದೇ, 26 ದಂತ ಚಿಕಿತ್ಸಾಲಯಗಳು, ಏಳು ಫಿಜಿಯೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇವುಗಳು ಸುಸಜ್ಜಿತ ವೈದ್ಯಕೀಯ ಉಪಕರಣಗಳನ್ನು ಹೊಂದಿರಲಿವೆ. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿನ ನಾಗರಿಕರಿಗೆ ಹೆಚ್ಚುವರಿ ಉಪಯುಕ್ತ ಆರೋಗ್ಯ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ ₹413.71 ಕೋಟಿ ವೆಚ್ಚ ಮಾಡುವ ಕ್ರಿಯಾ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.</p>.<p><strong>ಮನೆಗಳ ನಿರ್ಮಾಣ:</strong></p>.<p>ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸ್ಥಗಿತಗೊಳಿಸಿದ್ದ 61,894 ಮನೆಗಳ ನಿರ್ಮಾಣ ಯೋಜನೆಯನ್ನು ಮತ್ತೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ₹2,643 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಪಾಟೀಲ ತಿಳಿಸಿದರು.</p>.<p><strong>ಆನಂದರಾವ್ ವೃತ್ತದಲ್ಲಿ ಅವಳಿ ಗೋಪುರ</strong></p><p>ಆನಂದರಾವ್ ವೃತ್ತದಲ್ಲಿರುವ ಎನ್.ಎಚ್.ಕಾಂಪೌಂಡ್ ಆವರಣದಲ್ಲಿರುವ 8.78 ಎಕರೆ ವಿಸ್ತೀರ್ಣ ನಿವೇಶನ ಲೋಕೋಪಯೋಗಿ ಇಲಾಖೆ ವಶಕ್ಕೆ ಪಡೆದು ಅವಳಿ ಗೋಪುರ ನಿರ್ಮಾಣ ಯೋಜನೆ ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ.</p><p>ಇದಕ್ಕಾಗಿ ಆರ್ಥಿಕ ಹೂಡಿಕೆಗೆ ವ್ಯವಹಾರ ಸಲಹೆ ಗಾರರನ್ನು ನೇಮಕ ಮಾಡಿ ಮತ್ತೊಮ್ಮೆ ಸಚಿವ ಸಂಪುಟದ ಮುಂದೆ ಪ್ರಸ್ತಾವ ಮಂಡಿಸಲು ಸಂಪುಟ ಸಭೆ ನಿರ್ಣಯಿಸಿದೆ ಎಂದು ಎಚ್.ಕೆ.ಪಾಟೀಲ ತಿಳಿಸಿದರು.</p><p><strong>ಜಾತಿವಾರು ಜನಗಣತಿ ವರದಿ ಮೇಲಿನ ಚರ್ಚೆ ಮುಂದೂಡಿಕೆ</strong></p><p>ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನಗಣತಿ) ವರದಿ ಕುರಿತ ವಿಷಯ ಸಭೆಯ ಕಾರ್ಯಸೂಚಿಯಲ್ಲಿದ್ದರೂ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಿಲ್ಲ. ಆಡಳಿತಾತ್ಮಕ ಕಾರಣಕ್ಕಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು ಎಂದು ಎಚ್.ಕೆ.ಪಾಟೀಲ ಹೇಳಿದರು.</p><p>ಸಚಿವ ಸಂಪುಟದ ಮುಂದಿನ ಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಮುಂದೂಡಿಕೆಗೆ ರಾಜಕೀಯ ಕಾರಣಗಳಿಲ್ಲ. ಸಂಪುಟ ಸಭೆಗೂ ಒಂದು– ಅಥವಾ ಎರಡು ಗಂಟೆಗೂ ಮುನ್ನ ಮುಚ್ಚಿದ ಲಕೋಟೆಯಲ್ಲಿರುವ ವರದಿಯನ್ನು ತೆರೆಯಬೇಕು. ಆ ಬಳಿಕ ಚರ್ಚೆ ಆಗಬೇಕು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>