ದೇವನಹಳ್ಳಿಯ ನಿವಾಸಿಯೊಬ್ಬರು ಜಾಲ ಹೋಬಳಿಯ ಬೇಗೂರು ಗ್ರಾಮದಲ್ಲಿ ಹೋಟೆಲ್ ಆರಂಭಿಸಲು ಪರವಾನಗಿ ಕೋರಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ₹ 2,000 ಶುಲ್ಕದ ಜತೆ ₹ 3,500 ಲಂಚ ಸೇರಿಸಿ ಕೊಡುವಂತೆ ಅಂಕಿತಾಧಿಕಾರಿ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.