<p><strong>ಬೆಂಗಳೂರು:</strong> ಶೌಚಾಲಯ ಮತ್ತು ಮೂತ್ರಾಲಯಗಳ ಸ್ವಚ್ಛತಾ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಗೆ ಅನುಮೋದನೆ ನೀಡಲು ₹ 15,000 ಲಂಚ ಪಡೆಯುತ್ತಿದ್ದ ಬಿಬಿಎಂಪಿ ವಾರ್ಡ್ ಸಂಖ್ಯೆ 120–ಸಿ ಕಿರಿಯ ಆರೋಗ್ಯಾಧಿಕಾರಿ ಕೃಷ್ಣ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ.</p>.<p>ಗುತ್ತಿಗೆದಾರರೊಬ್ಬರು ವಾರ್ಡ್ 120–ಸಿ ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯ ಮತ್ತು ಮೂತ್ರಾಲಯಗಳ ಸ್ವಚ್ಛತಾ ಕೆಲಸ ನಿರ್ವಹಿಸಿದ್ದರು. ಆರು ತಿಂಗಳಿನಿಂದ ಬಿಲ್ ಪಾವತಿ ಮಾಡಿರಲಿಲ್ಲ. ಬಿಲ್ ಪಾವತಿಸುವಂತೆ ಅವರು ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದರು. ಕಡತವು ಕಿರಿಯ ಆರೋಗ್ಯಾಧಿಕಾರಿ ಬಳಿ ಬಾಕಿ ಇತ್ತು. ಅವರನ್ನು ಭೇಟಿಮಾಡಿದಾಗ, ₹ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>ಇಬ್ಬರ ನಡುವೆ ಈ ಕುರಿತು ಮಾತುಕತೆ ನಡೆದಿತ್ತು. ₹ 50,000 ನೀಡಿದರೆ ಬಿಲ್ ಪಾವತಿಗೆ ಶಿಫಾರಸು ಮಾಡುವುದಾಗಿ ತಿಳಿಸಿದ್ದ ಆರೋಪಿ ಅಧಿಕಾರಿ, ₹ 15,000 ಮುಂಗಡ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುತ್ತಿಗೆದಾರ ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ನಗರ ಘಟಕದ ಕಚೇರಿಗೆ ದೂರು ನೀಡಿದ್ದರು.</p>.<p>ಕಾಟನ್ಪೇಟೆಯ ತುಳಸಿ ತೋಟದಲ್ಲಿರುವ ವಾರ್ಡ್ ಕಚೇರಿಯಲ್ಲೇ ಸೋಮವಾರ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಕೃಷ್ಣ ಅವರನ್ನು ಬಂಧಿಸಿದರು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶೌಚಾಲಯ ಮತ್ತು ಮೂತ್ರಾಲಯಗಳ ಸ್ವಚ್ಛತಾ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಗೆ ಅನುಮೋದನೆ ನೀಡಲು ₹ 15,000 ಲಂಚ ಪಡೆಯುತ್ತಿದ್ದ ಬಿಬಿಎಂಪಿ ವಾರ್ಡ್ ಸಂಖ್ಯೆ 120–ಸಿ ಕಿರಿಯ ಆರೋಗ್ಯಾಧಿಕಾರಿ ಕೃಷ್ಣ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ.</p>.<p>ಗುತ್ತಿಗೆದಾರರೊಬ್ಬರು ವಾರ್ಡ್ 120–ಸಿ ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯ ಮತ್ತು ಮೂತ್ರಾಲಯಗಳ ಸ್ವಚ್ಛತಾ ಕೆಲಸ ನಿರ್ವಹಿಸಿದ್ದರು. ಆರು ತಿಂಗಳಿನಿಂದ ಬಿಲ್ ಪಾವತಿ ಮಾಡಿರಲಿಲ್ಲ. ಬಿಲ್ ಪಾವತಿಸುವಂತೆ ಅವರು ಬಿಬಿಎಂಪಿಗೆ ಅರ್ಜಿ ಸಲ್ಲಿಸಿದ್ದರು. ಕಡತವು ಕಿರಿಯ ಆರೋಗ್ಯಾಧಿಕಾರಿ ಬಳಿ ಬಾಕಿ ಇತ್ತು. ಅವರನ್ನು ಭೇಟಿಮಾಡಿದಾಗ, ₹ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>ಇಬ್ಬರ ನಡುವೆ ಈ ಕುರಿತು ಮಾತುಕತೆ ನಡೆದಿತ್ತು. ₹ 50,000 ನೀಡಿದರೆ ಬಿಲ್ ಪಾವತಿಗೆ ಶಿಫಾರಸು ಮಾಡುವುದಾಗಿ ತಿಳಿಸಿದ್ದ ಆರೋಪಿ ಅಧಿಕಾರಿ, ₹ 15,000 ಮುಂಗಡ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುತ್ತಿಗೆದಾರ ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ನಗರ ಘಟಕದ ಕಚೇರಿಗೆ ದೂರು ನೀಡಿದ್ದರು.</p>.<p>ಕಾಟನ್ಪೇಟೆಯ ತುಳಸಿ ತೋಟದಲ್ಲಿರುವ ವಾರ್ಡ್ ಕಚೇರಿಯಲ್ಲೇ ಸೋಮವಾರ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಕೃಷ್ಣ ಅವರನ್ನು ಬಂಧಿಸಿದರು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>