ಇ–ಖಾತಾ ನೀಡಲು ₹ 20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಯಲ್ಲಪ್ಪ, ₹ 5,000 ಮುಂಗಡವಾಗಿ ಪಡೆದಿದ್ದರು. ಉಳಿದ ಮೊತ್ತವನ್ನು ಶಿವಕುಮಾರ್ ಬಳಿ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಆಸ್ತಿ ಮಾಲೀಕರು ಎಸಿಬಿಗೆ ದೂರು ನೀಡಿದ್ದರು. ಬುಧವಾರ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಖಾಸಗಿ ವ್ಯಕ್ತಿಯನ್ನು ಬಂಧಿಸಿದರು. ಬಿಲ್ ಕಲೆಕ್ಟರ್ ತಲೆಮರೆಸಿಕೊಂಡಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.