<p><strong>ಬೆಂಗಳೂರು:</strong> ಫ್ಲ್ಯಾಟ್ ಒಂದನ್ನು ನೋಂದಣಿ ಮಾಡಲು ಆನೇಕಲ್ ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಪರವಾಗಿ ₹ 25,000 ಲಂಚ ಪಡೆದ ಐಕಾನ್ ಹೋಮ್ಸ್ ಎಂಬ ಖಾಸಗಿ ರಿಯಲ್ ಎಸ್ಟೇಟ್ ಉದ್ಯಮದ ಇಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.</p>.<p>‘ಐಕಾನ್ ಹೋಮ್ಸ್ ಕಂಪನಿ ಆನೇಕಲ್ ಸಮೀಪ ನಿರ್ಮಿಸಿರುವ ವಸತಿ ಸಮುಚ್ಚಯದಲ್ಲಿ ಗಂಗಾನಗರದ ನಿವಾಸಿಯೊಬ್ಬರು ಫ್ಲ್ಯಾಟ್ ಖರೀದಿಸಿದ್ದರು. ಅದನ್ನು ನೋಂದಣಿ ಮಾಡಲು ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗೆ ₹ 25,000 ಲಂಚ ನೀಡುವಂತೆ ಐಕಾನ್ ಹೋಮ್ಸ್ನ ಗ್ರಾಹಕ ಸಂಪರ್ಕ ವ್ಯವಸ್ಥಾಪಕಿ ಶಿರೀಶಾ ಬೇಡಿಕೆ ಇಟ್ಟಿದ್ದರು. ಹಣವನ್ನು ಕಂಪನಿಯ ಕೋ–ಆರ್ಡಿನೇಟರ್ ಭರತ ಎಂಬುವವರಿಗೆ ತಲುಪಿಸುವಂತೆ ಸೂಚಿಸಲಾಗಿತ್ತು. ಈ ಕುರಿತು ಖರೀದಿದಾರರು ದೂರು ನೀಡಿದ್ದರು’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಂಗಳವಾರ ದೂರುದಾರರಿಂದ ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಭರತ ಮತ್ತು ಶಿರೀಶಾ ಇಬ್ಬರನ್ನೂ ಬಂಧಿಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಫ್ಲ್ಯಾಟ್ ಒಂದನ್ನು ನೋಂದಣಿ ಮಾಡಲು ಆನೇಕಲ್ ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಪರವಾಗಿ ₹ 25,000 ಲಂಚ ಪಡೆದ ಐಕಾನ್ ಹೋಮ್ಸ್ ಎಂಬ ಖಾಸಗಿ ರಿಯಲ್ ಎಸ್ಟೇಟ್ ಉದ್ಯಮದ ಇಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.</p>.<p>‘ಐಕಾನ್ ಹೋಮ್ಸ್ ಕಂಪನಿ ಆನೇಕಲ್ ಸಮೀಪ ನಿರ್ಮಿಸಿರುವ ವಸತಿ ಸಮುಚ್ಚಯದಲ್ಲಿ ಗಂಗಾನಗರದ ನಿವಾಸಿಯೊಬ್ಬರು ಫ್ಲ್ಯಾಟ್ ಖರೀದಿಸಿದ್ದರು. ಅದನ್ನು ನೋಂದಣಿ ಮಾಡಲು ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗೆ ₹ 25,000 ಲಂಚ ನೀಡುವಂತೆ ಐಕಾನ್ ಹೋಮ್ಸ್ನ ಗ್ರಾಹಕ ಸಂಪರ್ಕ ವ್ಯವಸ್ಥಾಪಕಿ ಶಿರೀಶಾ ಬೇಡಿಕೆ ಇಟ್ಟಿದ್ದರು. ಹಣವನ್ನು ಕಂಪನಿಯ ಕೋ–ಆರ್ಡಿನೇಟರ್ ಭರತ ಎಂಬುವವರಿಗೆ ತಲುಪಿಸುವಂತೆ ಸೂಚಿಸಲಾಗಿತ್ತು. ಈ ಕುರಿತು ಖರೀದಿದಾರರು ದೂರು ನೀಡಿದ್ದರು’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಂಗಳವಾರ ದೂರುದಾರರಿಂದ ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಭರತ ಮತ್ತು ಶಿರೀಶಾ ಇಬ್ಬರನ್ನೂ ಬಂಧಿಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>