ದೂರುದಾರ ಮಂಜುನಾಥ್ ಅವರ ಅರ್ಜಿ ಬಾಕಿ ಇರುವುದು, ಅವರನ್ನು ಭೇಟಿ ಮಾಡಿರುವುದು, ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಹಣ ಪಡೆದುಕೊಂಡಿರುವ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸಲಾಯಿತು. ಕೆಲವು ಗಂಟೆಗಳ ಕಾಲ ಇಬ್ಬರನ್ನೂ ಪ್ರಶ್ನಿಸಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.