<p><strong>ಬೆಂಗಳೂರು</strong>: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಎಸ್.ಎಂ. ಶ್ರೀನಿವಾಸ್ ಮತ್ತು ಅವರ ಆಪ್ತ ಸಹಾಯಕ ಉಮೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಸ್ಥಿರಾಸ್ತಿಗಳ ಖಾತೆ ವಿಲೀನ ಪ್ರಕ್ರಿಯೆ ಪೂರೈಸಲು ₹ 4 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರನ್ನೂ ಸೋಮವಾರ ಸಂಜೆ ಬಂಧಿಸಲಾಗಿತ್ತು. ಸ್ಥಳ ಮಹಜರು ಹಾಗೂ ಹಣ ವಶಕ್ಕೆ ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಶ್ರೀನಿವಾಸ್ ಮತ್ತು ಉಮೇಶ್ ಅವರನ್ನು ಲೋಕಾಯುಕ್ತ ಕಚೇರಿಗೆ ಕರೆತರಲಾಗಿತ್ತು.</p>.<p>ದೂರುದಾರ ಮಂಜುನಾಥ್ ಅವರ ಅರ್ಜಿ ಬಾಕಿ ಇರುವುದು, ಅವರನ್ನು ಭೇಟಿ ಮಾಡಿರುವುದು, ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಹಣ ಪಡೆದುಕೊಂಡಿರುವ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸಲಾಯಿತು. ಕೆಲವು ಗಂಟೆಗಳ ಕಾಲ ಇಬ್ಬರನ್ನೂ ಪ್ರಶ್ನಿಸಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.</p>.<p>ವಿಚಾರಣೆ ಪೂರ್ಣಗೊಳಿಸಿ ತಡರಾತ್ರಿ ಇಬ್ಬರನ್ನೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ನಂತರ ಆರೋಪಿಗಳನ್ನು ಕರೆದೊಯ್ದ ಲೋಕಾಯುಕ್ತ ಪೊಲೀಸರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಶಕ್ಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಎಸ್.ಎಂ. ಶ್ರೀನಿವಾಸ್ ಮತ್ತು ಅವರ ಆಪ್ತ ಸಹಾಯಕ ಉಮೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಸ್ಥಿರಾಸ್ತಿಗಳ ಖಾತೆ ವಿಲೀನ ಪ್ರಕ್ರಿಯೆ ಪೂರೈಸಲು ₹ 4 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರನ್ನೂ ಸೋಮವಾರ ಸಂಜೆ ಬಂಧಿಸಲಾಗಿತ್ತು. ಸ್ಥಳ ಮಹಜರು ಹಾಗೂ ಹಣ ವಶಕ್ಕೆ ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಶ್ರೀನಿವಾಸ್ ಮತ್ತು ಉಮೇಶ್ ಅವರನ್ನು ಲೋಕಾಯುಕ್ತ ಕಚೇರಿಗೆ ಕರೆತರಲಾಗಿತ್ತು.</p>.<p>ದೂರುದಾರ ಮಂಜುನಾಥ್ ಅವರ ಅರ್ಜಿ ಬಾಕಿ ಇರುವುದು, ಅವರನ್ನು ಭೇಟಿ ಮಾಡಿರುವುದು, ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಹಣ ಪಡೆದುಕೊಂಡಿರುವ ಕುರಿತು ಆರೋಪಿಗಳನ್ನು ವಿಚಾರಣೆ ನಡೆಸಲಾಯಿತು. ಕೆಲವು ಗಂಟೆಗಳ ಕಾಲ ಇಬ್ಬರನ್ನೂ ಪ್ರಶ್ನಿಸಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.</p>.<p>ವಿಚಾರಣೆ ಪೂರ್ಣಗೊಳಿಸಿ ತಡರಾತ್ರಿ ಇಬ್ಬರನ್ನೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ನಂತರ ಆರೋಪಿಗಳನ್ನು ಕರೆದೊಯ್ದ ಲೋಕಾಯುಕ್ತ ಪೊಲೀಸರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಶಕ್ಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>