<p><strong>ಬೆಂಗಳೂರು</strong>: ಅನಧಿಕೃತ ಗೈರು ಹಾಜರಿಯ ಕಾರಣದಿಂದ ಕ್ರಮಕ್ಕೆ ಗುರಿಯಾಗುತ್ತಿದ್ದ ತನ್ನ ಸಹೋದ್ಯೋಗಿಯಿಂದಲೇ ₹ 2.75 ಲಕ್ಷ ಲಂಚ ಪಡೆದ ಪ್ರಕರಣದಲ್ಲಿ ನಾಗರಭಾವಿಯ ಪಿವಿಪಿ ಅನುದಾನಿತ ಪಾಲಿಟೆಕ್ನಿಕ್ನ ಪ್ರಥಮ ದರ್ಜೆ ಸಹಾಯಕ ಎಚ್. ಪ್ರಕಾಶ್ ಎಂಬುವವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಸಾಧಾರಣ ಜೈಲು ಶಿಕ್ಷೆ ಮತ್ತು ₹ 25,000 ದಂಡ ವಿಧಿಸಿದೆ.</p>.<p>ಪಾಂಚಜನ್ಯ ವಿದ್ಯಾಪೀಠ ವೆಲ್ಫೇರ್ ಟ್ರಸ್ಟ್ ಅಧೀನದ ಪಿವಿಪಿ ಪಾಲಿಟೆಕ್ನಿಕ್ನಲ್ಲಿ ಪ್ರಯೋಗಾಲಯ ಸಹಾಯಕರಾಗಿದ್ದ ಎಂ.ಎನ್. ಶ್ರೀನಿವಾಸ ದೀರ್ಘ ಕಾಲದಿಂದ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗಿದ್ದರು. ಅವರನ್ನು ಕೆಲಸದಿಂದ ವಜಾಗೊಳಿಸಲು ಆಡಳಿತ ಮಂಡಳಿ ಪ್ರಕ್ರಿಯೆ ಆರಂಭಿಸಿತ್ತು. ಈ ಸಂದರ್ಭದಲ್ಲಿ ಸಹೋದ್ಯೋಗಿಯನ್ನು ಸಂಪರ್ಕಿಸಿದ್ದ ಪ್ರಕಾಶ್, ₹ 3 ಲಕ್ಷ ಲಂಚ ನೀಡಿದರೆ ಶಿಸ್ತುಕ್ರಮದಿಂದ ಪಾರು ಮಾಡುವುದಾಗಿ ತಿಳಿಸಿದ್ದರು. ₹ 25,000 ಮೊತ್ತವನ್ನು ಮೊದಲ ಕಂತಿನಲ್ಲಿ ಪಡೆದುಕೊಂಡಿದ್ದರು.</p>.<p>₹ 2.75 ಲಕ್ಷ ನೀಡುವಂತೆ ಒತ್ತಾಯಿಸಿದಾಗ ಶ್ರೀನಿವಾಸ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ನಗರ ಘಟಕಕ್ಕೆ ದೂರು ಸಲ್ಲಿಸಿದ್ದರು. 2018ರ ಏಪ್ರಿಲ್ 11ರಂದು ಲಂಚ ಪಡೆಯುತ್ತಿದ್ದಾಗ ಪ್ರಕಾಶ್ ಅವರನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ಎಸಿಬಿ ಅಧಿಕಾರಿಗಳು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ಫೆಬ್ರುವರಿ 10ರಂದು ಆದೇಶ ಪ್ರಕಟಿಸಿರುವ ನ್ಯಾಯಾಧೀಶ ಕೆ. ಲಕ್ಷ್ಮೀನಾರಾಯಣ ಭಟ್, ‘ಪ್ರಕಾಶ್ ಅಪರಾಧಿ’ ಎಂದು ಸಾರಿದ್ದಾರೆ. ನಾಲ್ಕು ವರ್ಷಗಳ ಸಾಧಾರಣ ಜೈಲು ಶಿಕ್ಷೆ ಮತ್ತು ₹ 25,000 ದಂಡ ವಿಧಿಸಿದ್ದಾರೆ. ದಂಡ ಪಾವತಿಗೆ ತಪ್ಪಿದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.</p>.<p>ಎಸಿಬಿ ಅಧಿಕಾರಿಗಳು ಬಂಧಿಸಿದ ಬಳಿಕ ಪ್ರಕಾಶ್, ಎರಡು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಆ ಅವಧಿಯನ್ನು ಶಿಕ್ಷೆಯ ಪ್ರಮಾಣದಿಂದ ಕಡಿತಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅನಧಿಕೃತ ಗೈರು ಹಾಜರಿಯ ಕಾರಣದಿಂದ ಕ್ರಮಕ್ಕೆ ಗುರಿಯಾಗುತ್ತಿದ್ದ ತನ್ನ ಸಹೋದ್ಯೋಗಿಯಿಂದಲೇ ₹ 2.75 ಲಕ್ಷ ಲಂಚ ಪಡೆದ ಪ್ರಕರಣದಲ್ಲಿ ನಾಗರಭಾವಿಯ ಪಿವಿಪಿ ಅನುದಾನಿತ ಪಾಲಿಟೆಕ್ನಿಕ್ನ ಪ್ರಥಮ ದರ್ಜೆ ಸಹಾಯಕ ಎಚ್. ಪ್ರಕಾಶ್ ಎಂಬುವವರಿಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ನಾಲ್ಕು ವರ್ಷಗಳ ಸಾಧಾರಣ ಜೈಲು ಶಿಕ್ಷೆ ಮತ್ತು ₹ 25,000 ದಂಡ ವಿಧಿಸಿದೆ.</p>.<p>ಪಾಂಚಜನ್ಯ ವಿದ್ಯಾಪೀಠ ವೆಲ್ಫೇರ್ ಟ್ರಸ್ಟ್ ಅಧೀನದ ಪಿವಿಪಿ ಪಾಲಿಟೆಕ್ನಿಕ್ನಲ್ಲಿ ಪ್ರಯೋಗಾಲಯ ಸಹಾಯಕರಾಗಿದ್ದ ಎಂ.ಎನ್. ಶ್ರೀನಿವಾಸ ದೀರ್ಘ ಕಾಲದಿಂದ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗಿದ್ದರು. ಅವರನ್ನು ಕೆಲಸದಿಂದ ವಜಾಗೊಳಿಸಲು ಆಡಳಿತ ಮಂಡಳಿ ಪ್ರಕ್ರಿಯೆ ಆರಂಭಿಸಿತ್ತು. ಈ ಸಂದರ್ಭದಲ್ಲಿ ಸಹೋದ್ಯೋಗಿಯನ್ನು ಸಂಪರ್ಕಿಸಿದ್ದ ಪ್ರಕಾಶ್, ₹ 3 ಲಕ್ಷ ಲಂಚ ನೀಡಿದರೆ ಶಿಸ್ತುಕ್ರಮದಿಂದ ಪಾರು ಮಾಡುವುದಾಗಿ ತಿಳಿಸಿದ್ದರು. ₹ 25,000 ಮೊತ್ತವನ್ನು ಮೊದಲ ಕಂತಿನಲ್ಲಿ ಪಡೆದುಕೊಂಡಿದ್ದರು.</p>.<p>₹ 2.75 ಲಕ್ಷ ನೀಡುವಂತೆ ಒತ್ತಾಯಿಸಿದಾಗ ಶ್ರೀನಿವಾಸ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ನಗರ ಘಟಕಕ್ಕೆ ದೂರು ಸಲ್ಲಿಸಿದ್ದರು. 2018ರ ಏಪ್ರಿಲ್ 11ರಂದು ಲಂಚ ಪಡೆಯುತ್ತಿದ್ದಾಗ ಪ್ರಕಾಶ್ ಅವರನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ಎಸಿಬಿ ಅಧಿಕಾರಿಗಳು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ಫೆಬ್ರುವರಿ 10ರಂದು ಆದೇಶ ಪ್ರಕಟಿಸಿರುವ ನ್ಯಾಯಾಧೀಶ ಕೆ. ಲಕ್ಷ್ಮೀನಾರಾಯಣ ಭಟ್, ‘ಪ್ರಕಾಶ್ ಅಪರಾಧಿ’ ಎಂದು ಸಾರಿದ್ದಾರೆ. ನಾಲ್ಕು ವರ್ಷಗಳ ಸಾಧಾರಣ ಜೈಲು ಶಿಕ್ಷೆ ಮತ್ತು ₹ 25,000 ದಂಡ ವಿಧಿಸಿದ್ದಾರೆ. ದಂಡ ಪಾವತಿಗೆ ತಪ್ಪಿದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸುವಂತೆ ಆದೇಶಿಸಿದ್ದಾರೆ.</p>.<p>ಎಸಿಬಿ ಅಧಿಕಾರಿಗಳು ಬಂಧಿಸಿದ ಬಳಿಕ ಪ್ರಕಾಶ್, ಎರಡು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ಆ ಅವಧಿಯನ್ನು ಶಿಕ್ಷೆಯ ಪ್ರಮಾಣದಿಂದ ಕಡಿತಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>