<p><strong>ಬೆಂಗಳೂರು: </strong>ಯುವತಿ ನಾಪತ್ತೆ ಕುರಿತಂತೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸದ್ಯದ ಸ್ಥಿತಿಯ ಮಾಹಿತಿ ನೀಡಲು ₹ 5,000 ಲಂಚ ಪಡೆದ ಕಾಡುಗೋಡಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶನಿವಾರ ಬಂಧಿಸಿದೆ.</p>.<p>ಜಯನಗರದ ನಿವಾಸಿಯೊಬ್ಬರು ರಾಮಮೂರ್ತಿ ನಗರದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಯುವತಿ ನಾಪತ್ತೆಯಾಗಿದ್ದಾರೆ ಎಂದು ಅವರ ಪೋಷಕರು ಕಾಡುಗೋಡಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿತ್ತು. ವಿವಾಹ ನೋಂದಣಿ ಮಾಡಿಸಲು ಮುಂದಾಗಿದ್ದ ದಂಪತಿ, ನಾಪತ್ತೆ ಪ್ರಕರಣದ ತನಿಖೆ ಕುರಿತು ಮಾಹಿತಿ ನೀಡುವಂತೆ ತಮ್ಮ ಸ್ನೇಹಿತರ ಮೂಲಕ ಎಎಸ್ಐ ಅವರನ್ನು ಸಂಪರ್ಕಿಸಿದ್ದರು.</p>.<p>ಪ್ರಕರಣದ ಮಾಹಿತಿ ನೀಡಲು ₹ 5,000 ಲಂಚ ಕೊಡುವಂತೆ ಶ್ರೀನಿವಾಸ್ ಬೇಡಿಕೆ ಇಟ್ಟಿದ್ದರು. ಈ ಕುರಿತು ನವ ದಂಪತಿಯ ಸ್ನೇಹಿತರೊಬ್ಬರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಶನಿವಾರ ಎಎಸ್ಐ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯುವತಿ ನಾಪತ್ತೆ ಕುರಿತಂತೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಸದ್ಯದ ಸ್ಥಿತಿಯ ಮಾಹಿತಿ ನೀಡಲು ₹ 5,000 ಲಂಚ ಪಡೆದ ಕಾಡುಗೋಡಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶನಿವಾರ ಬಂಧಿಸಿದೆ.</p>.<p>ಜಯನಗರದ ನಿವಾಸಿಯೊಬ್ಬರು ರಾಮಮೂರ್ತಿ ನಗರದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಯುವತಿ ನಾಪತ್ತೆಯಾಗಿದ್ದಾರೆ ಎಂದು ಅವರ ಪೋಷಕರು ಕಾಡುಗೋಡಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಲಾಗಿತ್ತು. ವಿವಾಹ ನೋಂದಣಿ ಮಾಡಿಸಲು ಮುಂದಾಗಿದ್ದ ದಂಪತಿ, ನಾಪತ್ತೆ ಪ್ರಕರಣದ ತನಿಖೆ ಕುರಿತು ಮಾಹಿತಿ ನೀಡುವಂತೆ ತಮ್ಮ ಸ್ನೇಹಿತರ ಮೂಲಕ ಎಎಸ್ಐ ಅವರನ್ನು ಸಂಪರ್ಕಿಸಿದ್ದರು.</p>.<p>ಪ್ರಕರಣದ ಮಾಹಿತಿ ನೀಡಲು ₹ 5,000 ಲಂಚ ಕೊಡುವಂತೆ ಶ್ರೀನಿವಾಸ್ ಬೇಡಿಕೆ ಇಟ್ಟಿದ್ದರು. ಈ ಕುರಿತು ನವ ದಂಪತಿಯ ಸ್ನೇಹಿತರೊಬ್ಬರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಶನಿವಾರ ಎಎಸ್ಐ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>