₹ 5,000 ಲಂಚದ ಹಣವನ್ನು ಫೋನ್ ಪೇ ಮೂಲಕ ಪಡೆದಿದ್ದ ಆರೋಪಿ, ಎರಡನೇ ಕಂತಿನ ₹ 5,000 ನಗದನ್ನು ನೆಲಮಂಗಲ ಪಟ್ಟಣದಲ್ಲಿರುವ ತನ್ನ ಖಾಸಗಿ ಕಚೇರಿಗೆ ತಲುಪಿಸುವಂತೆ ಸೂಚಿಸಿದ್ದರು. ಶನಿವಾರ ಮಧ್ಯಾಹ್ನ ಅಲ್ಲಿಗೆ ತೆರಳಿದ ಮಂಜುನಾಥ್ ಲಂಚದ ಹಣ ನೀಡಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ಬಂಧಿಸಿದರು ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.