<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಂಭಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿದ್ದಾಗ ₹ ಎರಡು ಕೋಟಿ ಲಂಚ ಕೇಳಿದ್ದರು ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಲಾಗಿದೆ.</p>.<p>ಜನತಾದಳ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಸಿದ್ಧರಾಜು ಈ ದೂರು ನೀಡಿದ್ದು, ಅದರ ಜೊತೆ ಕೆಲವು ದೃಶ್ಯಾವಳಿ ಒಳಗೊಂಡ ಸಿ.ಡಿ ನೀಡಿದ್ದಾರೆ. ದೂರನ್ನು ಸ್ವೀಕರಿಸಿರುವ ಎಸಿಬಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಲಿದ್ದು, ಸಿ.ಡಿ ಅಸಲಿಯೇ ಎಂದು ಖಚಿತಪಡಿಸಿಕೊಳ್ಳಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿ ಮೂಲಗಳು ತಿಳಿಸಿವೆ.</p>.<p>ರೆವಿನ್ಯೂ ಫೈಲ್ಗಳನ್ನು ಕ್ಲಿಯರ್ ಮಾಡಲು ಶ್ಯಾಂಭಟ್, ಎರಡು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಸಂಗತಿ ಆ ಸಿ.ಡಿಯಲ್ಲಿದೆ.</p>.<p>ಅದು ನಕಲಿ ಸಿ.ಡಿ: ‘ನನ್ನ ವಿರುದ್ಧ ಎಸಿಬಿಗೆ ದೂರು ನೀಡಿರುವುದಾಗಿ ಟಿ.ವಿಗಳಲ್ಲಿ ಬಂದ ಸುದ್ದಿಯನ್ನು ನೋಡಿದ್ದೇನೆ. ಅಶ್ವತ್ಥಗೌಡ ಎಂಬ ವ್ಯಕ್ತಿ 2014ರಲ್ಲಿ ಕೆಲಸ ಮಾಡಿಸಿಕೊಳ್ಳಲು ನನ್ನ ಬಳಿ ಬಂದಿದ್ದರು. ಅವರು ನನ್ನ ವಿರುದ್ಧ ನಕಲಿ ಸಿ.ಡಿ ಮಾಡಿದ್ದಾರೆ. ಆ ಬಗ್ಗೆ 2014ರ ಡಿಸೆಂಬರ್ನಲ್ಲೇ ಶೇಷಾದ್ರಿಪುರಂ ಪೊಲೀಸರಿಗೆ ದೂರು ನೀಡಿದ್ದೆ’ ಎಂದು ಶ್ಯಾಂಭಟ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಂಭಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿದ್ದಾಗ ₹ ಎರಡು ಕೋಟಿ ಲಂಚ ಕೇಳಿದ್ದರು ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಲಾಗಿದೆ.</p>.<p>ಜನತಾದಳ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಸಿದ್ಧರಾಜು ಈ ದೂರು ನೀಡಿದ್ದು, ಅದರ ಜೊತೆ ಕೆಲವು ದೃಶ್ಯಾವಳಿ ಒಳಗೊಂಡ ಸಿ.ಡಿ ನೀಡಿದ್ದಾರೆ. ದೂರನ್ನು ಸ್ವೀಕರಿಸಿರುವ ಎಸಿಬಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಲಿದ್ದು, ಸಿ.ಡಿ ಅಸಲಿಯೇ ಎಂದು ಖಚಿತಪಡಿಸಿಕೊಳ್ಳಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿ ಮೂಲಗಳು ತಿಳಿಸಿವೆ.</p>.<p>ರೆವಿನ್ಯೂ ಫೈಲ್ಗಳನ್ನು ಕ್ಲಿಯರ್ ಮಾಡಲು ಶ್ಯಾಂಭಟ್, ಎರಡು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಸಂಗತಿ ಆ ಸಿ.ಡಿಯಲ್ಲಿದೆ.</p>.<p>ಅದು ನಕಲಿ ಸಿ.ಡಿ: ‘ನನ್ನ ವಿರುದ್ಧ ಎಸಿಬಿಗೆ ದೂರು ನೀಡಿರುವುದಾಗಿ ಟಿ.ವಿಗಳಲ್ಲಿ ಬಂದ ಸುದ್ದಿಯನ್ನು ನೋಡಿದ್ದೇನೆ. ಅಶ್ವತ್ಥಗೌಡ ಎಂಬ ವ್ಯಕ್ತಿ 2014ರಲ್ಲಿ ಕೆಲಸ ಮಾಡಿಸಿಕೊಳ್ಳಲು ನನ್ನ ಬಳಿ ಬಂದಿದ್ದರು. ಅವರು ನನ್ನ ವಿರುದ್ಧ ನಕಲಿ ಸಿ.ಡಿ ಮಾಡಿದ್ದಾರೆ. ಆ ಬಗ್ಗೆ 2014ರ ಡಿಸೆಂಬರ್ನಲ್ಲೇ ಶೇಷಾದ್ರಿಪುರಂ ಪೊಲೀಸರಿಗೆ ದೂರು ನೀಡಿದ್ದೆ’ ಎಂದು ಶ್ಯಾಂಭಟ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>