ಬೆಂಗಳೂರು: ಜಮೀನಿನ ಮ್ಯುಟೇಷನ್ ದಾಖಲೆಯನ್ನು ಖರೀದಿದಾರರ ಹೆಸರಿಗೆ ವರ್ಗಾಯಿಸಲು ₹ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ₹ 2 ಲಕ್ಷ ಪಡೆಯುವಾಗ ಸಿಕ್ಕಿಬಿದ್ದಿದ್ದ ಪ್ರಕರಣದಲ್ಲಿ ಕೆಂಗೇರಿ ಹೋಬಳಿಯ ಕಂದಾಯ ನಿರೀಕ್ಷಕ ಸುರೇಶ್ ಜಿ.ಸಿ. ದೋಷಿ ಎಂದು ತೀರ್ಮಾನಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 4 ಲಕ್ಷ ದಂಡ ವಿಧಿಸಿದೆ.