ಈ ಕುರಿತು ಖಾಸಗಿ ಕಂಪನಿಯ ಎಂಜಿನಿಯರ್ ಬಿ.ಎಸ್. ರಘುನಂದನ್, ಲೋಕಾಯುಕ್ತದ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಪ್ರಶಾಂತ್ ನಗರ ಬಿಬಿಎಂಪಿ ವಾರ್ಡ್ ಕಚೇರಿಗೆ ಶುಕ್ರವಾರ ಸಂಜೆ ತೆರಳಿದ ದೂರುದಾರರು, ಸಹಾಯಕ ಎಂಜಿನಿಯರ್ ಅವರನ್ನು ಭೇಟಿ ಮಾಡಿದರು. ಪ್ರವೀಣ್ ಸೂಚನೆಯಂತೆ ಸುರೇಶ್ ಹಣ ಪಡೆದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು, ಇಬ್ಬರೂ ಆರೋಪಿಗಳನ್ನು ಬಂಧಿಸಿದರು ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.