‘ಕೆ.ಆರ್.ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಂದ ವಸಂತಕುಮಾರ್ ಲಂಚ ಪಡೆಯುತ್ತಿದ್ದರು ಎಂಬ ಆರೋಪವಿತ್ತು. ವ್ಯಾಪಾರಿಗಳಿಂದ ದಾಖಲಾತಿ ಕೇಳುತ್ತಿದ್ದರು. ದಾಖಲೆಗಳನ್ನು ಕೊಡದಿದ್ದರೆ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂಬ ಆರೋಪ ಇದೆ. ಈ ಸಂಬಂಧ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಅದನ್ನೂ ಪರಿಶೀಲಿಸಲಾಗಿದೆ. ನಗರ ಪೊಲೀಸ್ ಕಮಿಷನರ್ ಅವರು ಅಮಾನತು ಮಾಡಿ ಆದೇಶಿಸಿದ್ಧಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.