ಕೆ.ಎಂ. ನಂಜಪ್ಪನವರ 111ನೇ ಜನ್ಮದಿನಾಚರಣೆ ಅಂಗವಾಗಿ ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಶಿಕ್ಷಣ ಸಂಸ್ಥೆಗಳು ಸರ್ಟಿಫಿಕೇಟ್ಗಳನ್ನು ಕೊಡುವುದಲ್ಲದೇ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸವನ್ನು ಮಾಡಬೇಕು. ರಚನಾತ್ಮಕ ಕಾರ್ಯಕ್ರಮಗಳನ್ನು ನಡೆಸುವ ಜೊತೆಗೆ ತ್ಯಾಗ, ಸೇವಾ ಮನೋಭಾವ, ಜೀವ ಉಳಿಸುವ ಪವಿತ್ರ ಕೆಲಸಗಳನ್ನು ಮಾಡಬೇಕು’ ಎಂದು ಕರೆ ನೀಡಿದರು.