‘ಮಂಗಳವಾರ ರಾತ್ರಿ ಊಟ ಮಾಡಿ ಮನೆಯ ಹಾಲ್ನಲ್ಲಿ ಸತೀಶ್ ಮಲಗಿದ್ದರು. ಇವರ ಪತ್ನಿ ಹಾಗೂ ಮಕ್ಕಳು ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ತಡರಾತ್ರಿ 2.30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸತೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಹೊಟ್ಟೆ, ಕೈಕಾಲು ಸೇರಿದಂತೆ ದೇಹದ ಇತರೆ ಭಾಗಗಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಸತೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಚೀರಾಟ ಕೇಳಿ ಪತ್ನಿ ಹಾಗೂ ಮಕ್ಕಳು ಎಚ್ಚರಗೊಂಡು ನೋಡಿದಾಗ ಸತೀಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.