<p><strong>ಬೆಂಗಳೂರು</strong>: ನಿವೇಶನ ಮಾರಾಟ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ‘ಬೃಂದಾವನ ಪ್ರಾಪರ್ಟಿಸ್’ ಕಂಪನಿ ನಿರ್ದೇಶಕ ದಿನೇಶ್ ಎಸ್. ಗೌಡ (38) ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಾಜಿನಗರದ 3ನೇ ಹಂತದಲ್ಲಿರುವ ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದ ಆರೋಪಿ ದಿನೇಶ್, ತಮ್ಮೂರಾದ ಅರಕಲಗೂಡಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ವಿಶೇಷ ತಂಡ ಅರಕಲಗೂಡಿಗೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಬಿಬಿಎ ಪದವೀಧರರಾದ ದಿನೇಶ್, ಪರಿಚಯಸ್ಥರನ್ನು ಸೇರಿಸಿಕೊಂಡು ಬೃಂದಾವನ ಪ್ರಾಪರ್ಟಿಸ್ ಕಂಪನಿ ಸ್ಥಾಪಿಸಿದ್ದರು. ತಾವರೆಕೆರೆ, ಹೆಸರಘಟ್ಟ, ನೆಲಮಂಗಲ ಹಾಗೂ ಇತರೆಡೆ ಕಂಪನಿಯ ಜಾಗವಿರುವುದಾಗಿ ಹೇಳುತ್ತಿದ್ದರು. ಅದೇ ಜಾಗದಲ್ಲಿ ನಿವೇಶಗಳನ್ನು ಅಭಿವೃದ್ಧಿಪಡಿಸಿ ಕಡಿಮೆ ದರಕ್ಕೆ ಮಾರಾಟ ಮಾಡುವುದಾಗಿ ಜಾಹೀರಾತು ನೀಡುತ್ತಿದ್ದರು.’</p>.<p>‘ಕೂಲಿ ಕಾರ್ಮಿಕರು, ಆಟೊ–ಟ್ಯಾಕ್ಸಿ ಚಾಲಕರು, ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಇತರರು ಕಂಪನಿಗೆ ಹಣ ತುಂಬಿ ನಿವೇಶನ ಕಾಯ್ದಿರಿಸಿದ್ದರು. ನಿಗದಿತ ಸಮಯಕ್ಕೆ ನಿವೇಶನ ನೀಡದೇ ಆರೋಪಿ ಸತಾಯಿಸಲಾರಂಭಿಸಿದ್ದರು. ಇದನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಂತೆ ಕಚೇರಿಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದರು’ ಎಂದೂ ಅಧಿಕಾರಿ ತಿಳಿಸಿದರು.</p>.<p class="Subhead"><strong>ಪೊಲೀಸರಿಂದಲೂ ಹಣ ಹೂಡಿಕೆ:</strong> ‘ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಕೆಲ ಪೊಲೀಸರು, ನಿವೇಶನ ಖರೀದಿಗಾಗಿ ಹಣ ಹೂಡಿಕೆ ಮಾಡಿದ್ದರು. ಅಂಥ ಪೊಲೀಸರು ಸಹ ದೂರು ನೀಡಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿವೇಶನ ಮಾರಾಟ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ‘ಬೃಂದಾವನ ಪ್ರಾಪರ್ಟಿಸ್’ ಕಂಪನಿ ನಿರ್ದೇಶಕ ದಿನೇಶ್ ಎಸ್. ಗೌಡ (38) ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಾಜಿನಗರದ 3ನೇ ಹಂತದಲ್ಲಿರುವ ಕಚೇರಿಗೆ ಬೀಗ ಹಾಕಿ ಪರಾರಿಯಾಗಿದ್ದ ಆರೋಪಿ ದಿನೇಶ್, ತಮ್ಮೂರಾದ ಅರಕಲಗೂಡಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರ ವಿಶೇಷ ತಂಡ ಅರಕಲಗೂಡಿಗೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಬಿಬಿಎ ಪದವೀಧರರಾದ ದಿನೇಶ್, ಪರಿಚಯಸ್ಥರನ್ನು ಸೇರಿಸಿಕೊಂಡು ಬೃಂದಾವನ ಪ್ರಾಪರ್ಟಿಸ್ ಕಂಪನಿ ಸ್ಥಾಪಿಸಿದ್ದರು. ತಾವರೆಕೆರೆ, ಹೆಸರಘಟ್ಟ, ನೆಲಮಂಗಲ ಹಾಗೂ ಇತರೆಡೆ ಕಂಪನಿಯ ಜಾಗವಿರುವುದಾಗಿ ಹೇಳುತ್ತಿದ್ದರು. ಅದೇ ಜಾಗದಲ್ಲಿ ನಿವೇಶಗಳನ್ನು ಅಭಿವೃದ್ಧಿಪಡಿಸಿ ಕಡಿಮೆ ದರಕ್ಕೆ ಮಾರಾಟ ಮಾಡುವುದಾಗಿ ಜಾಹೀರಾತು ನೀಡುತ್ತಿದ್ದರು.’</p>.<p>‘ಕೂಲಿ ಕಾರ್ಮಿಕರು, ಆಟೊ–ಟ್ಯಾಕ್ಸಿ ಚಾಲಕರು, ಖಾಸಗಿ ಕಂಪನಿ ಉದ್ಯೋಗಿಗಳು ಹಾಗೂ ಇತರರು ಕಂಪನಿಗೆ ಹಣ ತುಂಬಿ ನಿವೇಶನ ಕಾಯ್ದಿರಿಸಿದ್ದರು. ನಿಗದಿತ ಸಮಯಕ್ಕೆ ನಿವೇಶನ ನೀಡದೇ ಆರೋಪಿ ಸತಾಯಿಸಲಾರಂಭಿಸಿದ್ದರು. ಇದನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಂತೆ ಕಚೇರಿಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದರು’ ಎಂದೂ ಅಧಿಕಾರಿ ತಿಳಿಸಿದರು.</p>.<p class="Subhead"><strong>ಪೊಲೀಸರಿಂದಲೂ ಹಣ ಹೂಡಿಕೆ:</strong> ‘ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಕೆಲ ಪೊಲೀಸರು, ನಿವೇಶನ ಖರೀದಿಗಾಗಿ ಹಣ ಹೂಡಿಕೆ ಮಾಡಿದ್ದರು. ಅಂಥ ಪೊಲೀಸರು ಸಹ ದೂರು ನೀಡಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>