‘ಹೋಟೆಲ್ ಉದ್ಯಮದಲ್ಲಿ ನಂದಿನಿಯನ್ನೇ ನಂಬಿಕೊಂಡಿರುವವರು ಶೇ 90ಕ್ಕಿಂತ ಹೆಚ್ಚಿದ್ದಾರೆ. ನಂದಿನ ಹಾಲು ಗುಣಮಟ್ಟದಿಂದ ಕೂಡಿದ್ದು, ಹಾಲಿನ ಕೊರತೆಯಿಂದ ಸಕಾಲಕ್ಕೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅನಿವಾರ್ಯವಾಗಿ ಖಾಸಗಿ ಕಂಪನಿಗಳ ಹಾಲಿಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕು. ಕೆಎಂಎಫ್ ತಮಿಳುನಾಡು, ಆಂಧ್ರಪ್ರದೇಶ, ಸೇರಿ ಬೇರೆ ರಾಜ್ಯಗಳಲ್ಲಿ ನಂದಿನಿ ಹಾಲಿನ ಮಾರುಕಟ್ಟೆಯನ್ನು ವಿಸ್ತರಿಸಿಕೊಂಡ ಪರಿಣಾಮ ಸ್ಥಳೀಯವಾಗಿ ಈ ಅಭಾವ ಸೃಷ್ಟಿಯಾಗಿದೆ’ ಎಂದು ಪಿ.ಸಿ. ರಾವ್ ‘ಪ್ರಜಾವಾಣಿ’ಗೆ ತಿಳಿಸಿದರು.