ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2019ರಿಂದ 2022ರ ವರೆಗೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 5(2)ರ ಪ್ರಕಾರ, ಒಬ್ಬ ವ್ಯಕ್ತಿ ಒಮ್ಮೆ ಲೋಕಾಯುಕ್ತ ಅಥವಾ ಉಪ ಹುದ್ದೆ ಅಲಂಕರಿಸಿದರೆ ಮತ್ತೆ ಸರ್ಕಾರದ ಯಾವುದೇ ಲಾಭದಾಯಕ ಹುದ್ದೆಯಲ್ಲಿ ಮುಂದುವರೆಯಬಾರದು ಎಂಬ ನಿಯಮವಿದೆ. ಆದರೆ, 2022ರ ಜೂನ್ 15ರಂದು ಅಕ್ರಮವಾಗಿ ಮತ್ತೆ ಲೋಕಾಯುಕ್ತರಾಗಿ ನೇಮಕವಾಗಿದ್ದಾರೆ’ ಎಂದು ದೂರಿದರು.