ಮುಖ್ಯಮಂತ್ರಿಯವರ ಪೊಲೀಸ್ ಪದಕ ಪ್ರದಾನ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಜತೆ ಚರ್ಚಿಸಿ ಬಂದಿದ್ದೇನೆ. ಮೂರು ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಹೊಸದಾಗಿ ಯಾರು ಸಚಿವರಾಗುತ್ತಾರೆ ಎನ್ನುವುದೂ ತಿಳಿಯುತ್ತದೆ’ ಎಂದರು.