ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ‘ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ವರ್ಷದಲ್ಲಿ ಒಮ್ಮೆ ನೆನಪಿಸಿಕೊಂಡು ಸುಮ್ಮನಾಗುತ್ತೇವೆ. ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳದಿರುವುದು ನಮ್ಮ ದುರಂತ. ಸ್ವಾತಂತ್ರ್ಯ ಬಳಿಕ ದೇಶ ಅಭಿವೃದ್ಧಿಯಾಗುತ್ತಿದೆ. ಆದರೆ, ಅದರ ಹಿಂದಿನ ಪರಿಕಲ್ಪನೆ ಮಾತ್ರ ಮುನ್ನೆಲೆಗೆ ಬಂದಿಲ್ಲ. ಚರಿತ್ರೆಯಲ್ಲಿ ಸೇರದಿದ್ದವರನ್ನು ಸೇರಿಸುವುದು ನಮ್ಮ ಜವಾಬ್ದಾರಿ’ ಎಂದು ಭರವಸೆ ನೀಡಿದರು.