ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಜನ್ಮದಿನ: ಬಿಜೆಪಿಗೆ ದುಡಿದ ರೈತ ಕಾರ್ಯಕರ್ತರಿಗೆ ಉಚಿತ ಟ್ರ್ಯಾಕ್ಟರ್

Last Updated 27 ಫೆಬ್ರುವರಿ 2022, 6:27 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಗಾಗಿ ದುಡಿದ ರೈತ ಕಾರ್ಯಕರ್ತರಿಗೆಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಅಂಗವಾಗಿ ಒಟ್ಟು 15 ಟ್ರ್ಯಾಕ್ಟರ್‌ಗಳನ್ನು ಪಕ್ಷದ ಪ್ರಮುಖರು ಉಚಿತವಾಗಿ ವಿತರಿಸಲಿದ್ದಾರೆ.

ಕರ್ನಾಟಕ ಗ್ರಾಮೀಣ ಮೂಲ ಸವಲತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರುದ್ರೇಶ್ ನೇತೃತ್ವದಲ್ಲಿ ಟ್ರ್ಯಾಕ್ಟರ್ ವಿತರಣಾ ಕಾರ್ಯಕ್ರಮವನ್ನು ಇದೇ 27ರಂದು ಯಡಿಯೂರಪ್ಪ ಅವರ ‘ಕಾವೇರಿ’ ನಿವಾಸದಲ್ಲಿ ಆಯೋಜಿಸಲಾಗಿದೆ.

‘ಯಡಿಯೂರಪ್ಪ ಅವರು ಪಕ್ಷವನ್ನು ತಳ ಹಂತದಿಂದ ಕಟ್ಟಿ ಬೆಳೆಸುವ ಜತೆಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ರೈತರ ಜತೆಗೆ ಎಲ್ಲಾ ಜಾತಿ ಮತ್ತು ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಕಾರ್ಯಕ್ರಮ ಟ್ರ್ಯಾಕ್ಟರ್ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ’ ಎಂದು ಎಂ. ರುದ್ರೇಶ್ ತಿಳಿಸಿದರು.

‘ಉಚಿತವಾಗಿ ಟ್ರ್ಯಾಕ್ಟರ್ ವಿತರಿಸುವ ಕಾರ್ಯಕ್ರಮಕ್ಕೆ ಕೆಆರ್‌ಐಡಿಎಲ್ ಅಧ್ಯಕ್ಷ ಚಂದು ಪಾಟೀಲ, ಕೆಎಸ್‌ಎಸ್‌ಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬಿಲ್ದಾಳೆ, ಎಸ್‌ಟಿಆರ್‌ಆರ್‌ ಅಧ್ಯಕ್ಷ ಮುನಿರಾಜು, ಬಿಎಂಐಸಿಸಿ ಅಧ್ಯಕ್ಷ ಜೈದೇವ್, ಎಂಎಂಎಲ್‌ ಅಧ್ಯಕ್ಷ ಲಿಂಗಮೂರ್ತಿ ಕೈಜೋಡಿಸಿದ್ದಾರೆ’ ಎಂದು ರುದ್ರೇಶ್‌ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT