ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಆಯುಕ್ತರ ಆದೇಶ ವಾಪಸ್‌: ಸಿ.ಎಂ ಭರವಸೆ

Last Updated 23 ಮಾರ್ಚ್ 2021, 20:49 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುವ ಕಾಮಗಾರಿಗಳ ಗುತ್ತಿಗೆಗೆ ಪಡೆದ ಗುತ್ತಿಗೆದಾರರು ಕನಿಷ್ಠ ಎರಡರಿಂದ ಮೂರು ವರ್ಷಗಳ ಬಿಲ್‌ ಮೊತ್ತ ಬಿಡುಗಡೆಗೆ ಒತ್ತಾಯಿಸಬಾರದು’ ಎಂದು ಬಿಬಿಎಂಪಿ ಆಯುಕ್ತರು ಹೊರಡಿಸಿರುವ ಆದೇಶವನ್ನು ತಕ್ಷಣ ವಾಪಸ್‌ ಪಡೆಯಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ವಿಧಾನ ಪರಿಷತ್‌ನಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ಸಿನ ಪಿ.ಆರ್. ರಮೇಶ್, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಗುತ್ತಿಗೆಗೆ ಪಡೆಯುವವರು ಕಾಮಗಾರಿ ಮುಗಿದ ನಂತರ ಕನಿಷ್ಠ 2–3 ವರ್ಷಗಳ ಹಣ ಬಿಡುಗಡೆಗೆ ಒತ್ತಾಯಿಸಬಾರದು. ಈ ಸಂಬಂಧ ₹200ರ ಬಾಂಡ್ ಪೇಪರ್‌ನಲ್ಲಿ ಮುಚ್ಚಳಿಕೆ ಬರೆದುಕೊಡಬೇಕು ಎಂದು ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ’ ಎಂದರು.

‘ಆಯುಕ್ತರ ಈ ಆದೇಶದಿಂದ ಸಾಲ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಇಂಥ ಆದೇಶಗಳಿಂದ ಬಿಬಿಎಂಪಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಗುತ್ತಿಗೆದಾರರು ಕಾಮಗಾರಿಗಳನ್ನು ನಿರ್ವಹಿಸಲು ಮುಂದೆ ಬರುವುದಿಲ್ಲ. ತಕ್ಷಣ ಈ ಆದೇಶ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸದನದಲ್ಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ‘ಈ ಕುರಿತು ಬಿಬಿಎಂಪಿ ಆಯುಕ್ತರ ಜೊತೆ ಚರ್ಚೆ ನಡೆಸಲಾಗುವುದು. ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಸೂಚಿಸುತ್ತೇನೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT