<p><strong>ಬೆಂಗಳೂರು:</strong> ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ರಾಜ್ಯ ಘಟಕದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವಿಭಾಗ ಮಟ್ಟದ ನಾಲ್ಕು ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ.</p>.<p>‘ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ಬಹುಜನರ ನಡಿಗೆ – ಪಾರ್ಲಿಮೆಂಟಿನ ಕಡೆಗೆ’ ಘೋಷಣೆಯೊಂದಿಗೆ ಈ ಸಮಾವೇಶಗಳು ನಡೆಯಲಿವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಸಮಾವೇಶದ ಮೂಲಕ ಇಲ್ಲಿವರೆಗೂ ದೇಶವನ್ನಾಳಿದ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳು ಸಂವಿಧಾನವನ್ನು ಹೇಗೆ ದುರ್ಬಲಗೊಳಿಸಿವೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p><strong>ಸಮಾವೇಶಗಳ ವಿವರ</strong>: ಬೆಂಗಳೂರು ವಿಭಾಗದ ಸಮಾವೇಶ, ದೇವನಹಳ್ಳಿಯಲ್ಲಿ ಮಾ.9ರಂದು ನಡೆಯಲಿದೆ. ಮಾ.10ರಂದು ಮೈಸೂರು ವಿಭಾಗದ ಸಮಾವೇಶ, ಸಕಲೇಶಪುರದಲ್ಲಿ, ಬೆಳಗಾವಿ ವಿಭಾಗದ ಸಮಾವೇಶ ಮಾ.11ರಂದು ವಿಜಯಪುರ ನಗರದಲ್ಲಿ ನಡೆಯಲಿದೆ. ಕಲಬುರಗಿ ವಿಭಾಗದ ಸಮಾವೇಶ, ಮಾ.12ರಂದು ಕಲಬುರಗಿಯಲ್ಲಿ ನಡೆಯಲಿದೆ.</p>.<p>ಸಮಾವೇಶದಲ್ಲಿ ಮುಖ್ಯ ಅತಿಥಿಗಳಿಗಾಗಿ ರಾಜ್ಯಸಭಾ ಸದಸ್ಯ ರಾಮ್ಜಿ ಗೌತಮ್, ಪಕ್ಷದ ಮುಖಂಡರಾದ ನಿತಿನ್ ಸಿಂಗ್, ಎಂ.ಗೋಪಿನಾಥ್ ಮತ್ತು ಎಂ.ಕೃಷ್ಣಮೂರ್ತಿಯವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ರಾಜ್ಯ ಘಟಕದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ವಿಭಾಗ ಮಟ್ಟದ ನಾಲ್ಕು ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ.</p>.<p>‘ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ ಬಹುಜನರ ನಡಿಗೆ – ಪಾರ್ಲಿಮೆಂಟಿನ ಕಡೆಗೆ’ ಘೋಷಣೆಯೊಂದಿಗೆ ಈ ಸಮಾವೇಶಗಳು ನಡೆಯಲಿವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಸಮಾವೇಶದ ಮೂಲಕ ಇಲ್ಲಿವರೆಗೂ ದೇಶವನ್ನಾಳಿದ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳು ಸಂವಿಧಾನವನ್ನು ಹೇಗೆ ದುರ್ಬಲಗೊಳಿಸಿವೆ ಎಂಬುದನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p><strong>ಸಮಾವೇಶಗಳ ವಿವರ</strong>: ಬೆಂಗಳೂರು ವಿಭಾಗದ ಸಮಾವೇಶ, ದೇವನಹಳ್ಳಿಯಲ್ಲಿ ಮಾ.9ರಂದು ನಡೆಯಲಿದೆ. ಮಾ.10ರಂದು ಮೈಸೂರು ವಿಭಾಗದ ಸಮಾವೇಶ, ಸಕಲೇಶಪುರದಲ್ಲಿ, ಬೆಳಗಾವಿ ವಿಭಾಗದ ಸಮಾವೇಶ ಮಾ.11ರಂದು ವಿಜಯಪುರ ನಗರದಲ್ಲಿ ನಡೆಯಲಿದೆ. ಕಲಬುರಗಿ ವಿಭಾಗದ ಸಮಾವೇಶ, ಮಾ.12ರಂದು ಕಲಬುರಗಿಯಲ್ಲಿ ನಡೆಯಲಿದೆ.</p>.<p>ಸಮಾವೇಶದಲ್ಲಿ ಮುಖ್ಯ ಅತಿಥಿಗಳಿಗಾಗಿ ರಾಜ್ಯಸಭಾ ಸದಸ್ಯ ರಾಮ್ಜಿ ಗೌತಮ್, ಪಕ್ಷದ ಮುಖಂಡರಾದ ನಿತಿನ್ ಸಿಂಗ್, ಎಂ.ಗೋಪಿನಾಥ್ ಮತ್ತು ಎಂ.ಕೃಷ್ಣಮೂರ್ತಿಯವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>