ನಂತರ ಮಾತನಾಡಿದ ಪುಟ್ಟಸಿದ್ದಶೆಟ್ಟಿ, ‘ಕಾಂಗ್ರೆಸ್ ಪಕ್ಷದಲ್ಲಿ ಮೇಲ್ವರ್ಗದವರಿಗೆ ಮಾತ್ರ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ. ಜೊತೆಗೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಬಣಗಳ ಮಧ್ಯೆ ನಡೆಯುವ ಜಗಳದಿಂದ ಜನ ಬೇಸತ್ತಿದ್ದಾರೆ. ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್ ಪಡೆಯುವುದಕ್ಕೆ ಸೀಮಿತವಾಗಿದೆ. ಜೆಡಿಎಸ್ ಎಂಬುದು ಕೇವಲ ಒಂದು ಕುಟುಂಬಕ್ಕೆ ಸೀಮಿತವಾದ ಪಕ್ಷವಾಗಿ ಮಾರ್ಪಟ್ಟಿದೆ’ ಎಂದು ಲೇವಡಿ ಮಾಡಿದರು.