<p><strong>ಕೆಂಗೇರಿ</strong>: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಚುನಾವಣೆಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಏಕಾಏಕಿ ಘೋಷಿಸಿರುವುದು ದುಡುಕಿನ ನಿರ್ಧಾರವಾಗಿದೆ. ಇದು ಮೈತ್ರಿ ಧರ್ಮಕ್ಕೆ ಮಾಡಿದ ಅಪಚಾರ’ ಎಂದು ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಟಿ.ಎನ್.ಜವರಾಯಿಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಂದಿನ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್.ರುದ್ರೇಶ್ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಅನುಭವಿ ರಾಜಕಾರಣಿಯೊಬ್ಬರು ಹೀಗೆ ಏಕಾಏಕಿ ಅಭ್ಯರ್ಥಿ ಹೆಸರು ಘೋಷಿಸಿರುವುದು, ಜೆಡಿಎಸ್ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಯಡಿಯೂರಪ್ಪ ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಯುತ್ತಿಲ್ಲ. ಈ ಹೇಳಿಕೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವ ಅರ್ಥವನ್ನು ಮೂಡಿಸುವಂತಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೆ ಘಾಸಿಯಾಗಿದೆ’ ಎಂದರು.</p>.<p>‘ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷದ ಬಿಜೆಪಿಯ ಮುಖಂಡರ ನೇತೃತ್ವದಲ್ಲಿ ನಿರ್ಧಾರವಾಗುವ ಒಮ್ಮತದ ಅಭ್ಯರ್ಥಿಗಷ್ಟೇ ನಮ್ಮ ಬೆಂಬಲ’ ಎಂದು ತಿಳಿಸಿದರು.</p>.<p>‘ಮುಂಬರುವ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷ ಈ ಕ್ಷೇತ್ರದಲ್ಲಿ ಭದ್ರ ನೆಲೆ ಹೊಂದಿದೆ. ಕುಮಾರಸ್ವಾಮಿ ಅಥವಾ ನಿಖಿಲ್ ಸ್ಪರ್ಧಿಸಿದರೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಯಾವುದೇ ಕಾರಣಕ್ಕೂ ಕ್ಷೇತ್ರ ಹಾಗೂ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ಎಲ್ಲ ವಿದ್ಯಮಾನಗಳನ್ನು ಜೆಡಿಎಸ್ ವರಿಷ್ಠರ ಗಮನಕ್ಕೆ ತರಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಚುನಾವಣೆಗೆ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಏಕಾಏಕಿ ಘೋಷಿಸಿರುವುದು ದುಡುಕಿನ ನಿರ್ಧಾರವಾಗಿದೆ. ಇದು ಮೈತ್ರಿ ಧರ್ಮಕ್ಕೆ ಮಾಡಿದ ಅಪಚಾರ’ ಎಂದು ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಟಿ.ಎನ್.ಜವರಾಯಿಗೌಡ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಂದಿನ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್.ರುದ್ರೇಶ್ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಅನುಭವಿ ರಾಜಕಾರಣಿಯೊಬ್ಬರು ಹೀಗೆ ಏಕಾಏಕಿ ಅಭ್ಯರ್ಥಿ ಹೆಸರು ಘೋಷಿಸಿರುವುದು, ಜೆಡಿಎಸ್ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಯಡಿಯೂರಪ್ಪ ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಯುತ್ತಿಲ್ಲ. ಈ ಹೇಳಿಕೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವ ಅರ್ಥವನ್ನು ಮೂಡಿಸುವಂತಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೆ ಘಾಸಿಯಾಗಿದೆ’ ಎಂದರು.</p>.<p>‘ಎಚ್.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷದ ಬಿಜೆಪಿಯ ಮುಖಂಡರ ನೇತೃತ್ವದಲ್ಲಿ ನಿರ್ಧಾರವಾಗುವ ಒಮ್ಮತದ ಅಭ್ಯರ್ಥಿಗಷ್ಟೇ ನಮ್ಮ ಬೆಂಬಲ’ ಎಂದು ತಿಳಿಸಿದರು.</p>.<p>‘ಮುಂಬರುವ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷ ಈ ಕ್ಷೇತ್ರದಲ್ಲಿ ಭದ್ರ ನೆಲೆ ಹೊಂದಿದೆ. ಕುಮಾರಸ್ವಾಮಿ ಅಥವಾ ನಿಖಿಲ್ ಸ್ಪರ್ಧಿಸಿದರೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಯಾವುದೇ ಕಾರಣಕ್ಕೂ ಕ್ಷೇತ್ರ ಹಾಗೂ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ಎಲ್ಲ ವಿದ್ಯಮಾನಗಳನ್ನು ಜೆಡಿಎಸ್ ವರಿಷ್ಠರ ಗಮನಕ್ಕೆ ತರಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>