‘ನನಗೊಂದು ಕೆಲಸ ಕೊಟ್ಟರೆ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ. ನಮ್ಮ ಮನವಿಯನ್ನು ದಯವಿಟ್ಟು ಸಕಾರಾತ್ಮಕವಾಗಿ ಪರಿಗಣಿಸಿ’ ಎಂದು ನಾಗೇಶ್ ಕೋರಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಯಡಿಯೂರಪ್ಪ , ನಾಗೇಶ್ ಗುತ್ತಿಗೆ ಆಧಾರದ ಮೇಲೆ ವಿಧಾನಸೌಧದಲ್ಲಿ ಕೆಲಸ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.