<p><strong>ಬೆಂಗಳೂರು:</strong> ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 2024–25ನೇ ಸಾಲಿನಲ್ಲಿ ₹27 ಕೋಟಿ ವೆಚ್ಚದ ಕಾಮಗಾರಿಗಳು ಅನುಮೋದನೆಗೊಂಡಿದ್ದವು. ಅದರಲ್ಲಿ ಕೆಲವು ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಎಲ್ಲ ಕಾಮಗಾರಿಗಳನ್ನು ಶುರು ಮಾಡಬೇಕು. ಜೆ.ಡಿ. ಮರ ಕಾಲೊನಿ, ಎನ್.ಎಸ್. ಪಾಳ್ಯ ವಾರ್ಡ್ಗಳ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಸೂಚಿಸಿದರು.</p>.<p>ಮಂದಗತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಆದರೂ ಕಾಮಗಾರಿ ಸರಿಯಾಗಿ ನಿರ್ವಹಿಸದಿರುವ ಪ್ರಕರಣಗಳಲ್ಲಿ ಟೆಂಡರ್ ರದ್ದುಪಡಿಸಿ ಮರುಟೆಂಡರ್ ಕರೆಯಿರಿ ಎಂದು ಹೇಳಿದರು.</p>.<p>ಹಿಂದಿನ ಆರ್ಥಿಕ ವರ್ಷಗಳಲ್ಲಿ ಕರೆಯಲಾಗಿರುವ ಟೆಂಡರ್ಗಳಲ್ಲಿ ಕಾಮಗಾರಿಗಳು ಸಮರ್ಪಕವಾಗಿ ಮುಗಿದ ನಂತರವೇ ಈ ಸಾಲಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಬೇಕು ಎಂದರು.</p>.<p>ಪಾದಚಾರಿ ಮಾರ್ಗದ ನಿರ್ವಹಣೆ ಸರಿ ಇಲ್ಲ. ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಾದಚಾರಿ ಮೇಲ್ಸೇತುವೆಗಳು ಸರಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಎಂಜಿನಿಯರ್ಗಳು ಬೈಕ್ನಲ್ಲಿ ಸಂಚರಿಸಿ ಎಲ್ಲ ಕಡೆ ಪರಿಶೀಲನೆ ನಡೆಸಿ ಸರಿಪಡಿಸಬೇಕು ಎಂದು ಸಲಹೆ ನೀಡಿದರು.</p>.<p>ಈಜಿಪುರ ಮೇಲ್ಸೇತುವೆ ಬಳಿ ಬೀದಿ ದೀಪಗಳನ್ನು ಅಳವಡಿಸಬೇಕು. ಮಡಿವಾಳ ಕೆರೆ ಸಂಪೂರ್ಣ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ಒತ್ತು ಕೊಡಬೇಕು. ಅನಗತ್ಯವಾದ ಕಡೆ ವೈಟ್ಟಾಪಿಂಗ್ ರದ್ದುಗೊಳಿಸಿ ಕೆರೆ ಅಭಿವೃದ್ಧಿಗೆ ಪ್ರಸ್ತಾವ ಸಲ್ಲಿಸ ಬೇಕು ಎಂದರು. </p>.<p>ಪಾಲಿಕೆ ಆಯುಕ್ತ ಕೆ.ಎನ್. ರಮೇಶ್, ಆಡಳಿತ ವಿಭಾಗದ ಹೆಚ್ಚುವರಿ ಆಯುಕ್ತ ರಾಚಪ್ಪ, ಜಂಟಿ ಆಯುಕ್ತ ಸತೀಶ್ ಬಾಬು, ಮುಖ್ಯಎಂಜಿನಿಯರ್ಗಳಾದ ಬಸವರಾಜ ಕಬಾಡೆ, ಕೆ.ವಿ. ರವಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 2024–25ನೇ ಸಾಲಿನಲ್ಲಿ ₹27 ಕೋಟಿ ವೆಚ್ಚದ ಕಾಮಗಾರಿಗಳು ಅನುಮೋದನೆಗೊಂಡಿದ್ದವು. ಅದರಲ್ಲಿ ಕೆಲವು ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಎಲ್ಲ ಕಾಮಗಾರಿಗಳನ್ನು ಶುರು ಮಾಡಬೇಕು. ಜೆ.ಡಿ. ಮರ ಕಾಲೊನಿ, ಎನ್.ಎಸ್. ಪಾಳ್ಯ ವಾರ್ಡ್ಗಳ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಸೂಚಿಸಿದರು.</p>.<p>ಮಂದಗತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಆದರೂ ಕಾಮಗಾರಿ ಸರಿಯಾಗಿ ನಿರ್ವಹಿಸದಿರುವ ಪ್ರಕರಣಗಳಲ್ಲಿ ಟೆಂಡರ್ ರದ್ದುಪಡಿಸಿ ಮರುಟೆಂಡರ್ ಕರೆಯಿರಿ ಎಂದು ಹೇಳಿದರು.</p>.<p>ಹಿಂದಿನ ಆರ್ಥಿಕ ವರ್ಷಗಳಲ್ಲಿ ಕರೆಯಲಾಗಿರುವ ಟೆಂಡರ್ಗಳಲ್ಲಿ ಕಾಮಗಾರಿಗಳು ಸಮರ್ಪಕವಾಗಿ ಮುಗಿದ ನಂತರವೇ ಈ ಸಾಲಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಬೇಕು ಎಂದರು.</p>.<p>ಪಾದಚಾರಿ ಮಾರ್ಗದ ನಿರ್ವಹಣೆ ಸರಿ ಇಲ್ಲ. ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಪಾದಚಾರಿ ಮೇಲ್ಸೇತುವೆಗಳು ಸರಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಎಂಜಿನಿಯರ್ಗಳು ಬೈಕ್ನಲ್ಲಿ ಸಂಚರಿಸಿ ಎಲ್ಲ ಕಡೆ ಪರಿಶೀಲನೆ ನಡೆಸಿ ಸರಿಪಡಿಸಬೇಕು ಎಂದು ಸಲಹೆ ನೀಡಿದರು.</p>.<p>ಈಜಿಪುರ ಮೇಲ್ಸೇತುವೆ ಬಳಿ ಬೀದಿ ದೀಪಗಳನ್ನು ಅಳವಡಿಸಬೇಕು. ಮಡಿವಾಳ ಕೆರೆ ಸಂಪೂರ್ಣ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ಒತ್ತು ಕೊಡಬೇಕು. ಅನಗತ್ಯವಾದ ಕಡೆ ವೈಟ್ಟಾಪಿಂಗ್ ರದ್ದುಗೊಳಿಸಿ ಕೆರೆ ಅಭಿವೃದ್ಧಿಗೆ ಪ್ರಸ್ತಾವ ಸಲ್ಲಿಸ ಬೇಕು ಎಂದರು. </p>.<p>ಪಾಲಿಕೆ ಆಯುಕ್ತ ಕೆ.ಎನ್. ರಮೇಶ್, ಆಡಳಿತ ವಿಭಾಗದ ಹೆಚ್ಚುವರಿ ಆಯುಕ್ತ ರಾಚಪ್ಪ, ಜಂಟಿ ಆಯುಕ್ತ ಸತೀಶ್ ಬಾಬು, ಮುಖ್ಯಎಂಜಿನಿಯರ್ಗಳಾದ ಬಸವರಾಜ ಕಬಾಡೆ, ಕೆ.ವಿ. ರವಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>