<p>ಬೆಂಗಳೂರು: ಬೌದ್ಧ ಧರ್ಮದ ತತ್ವ ಚಿಂತನೆಗಳ ಅಧ್ಯಯನಕ್ಕೆ ವಿಶೇಷ ಉತ್ತೇಜನ ನೀಡಲು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದೆಂದು ಕುಲಪತಿಗಳಾದ ಪ್ರೊ. ರಮೇಶ್.ಬಿ. ತಿಳಿಸಿದ್ದಾರೆ.</p><p>ಕಲಬುರಗಿಯ ಪಾಲಿ ಇನ್ ಸ್ಟಿಟ್ಯೂಟ್ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಪಾಲಿ-ಕನ್ನಡ ಶಬ್ದಕೋಶ ದ ನಾಲ್ಕನೆಯ ಸಂಪುಟದ ಜನಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.</p><p>ಕ್ರಿ.ಪೂ. 5ನೇ ಶತಮಾನದ ಕಾಲಘಟ್ಟದಲ್ಲಿ ಜನಬಳಕೆಯ ಭಾಷೆಯಾಗಿದ್ದ ಪಾಲಿ ಭಾಷೆ ಭಾರತೀಯ ಜ್ಞಾನ ಶಾಖೆಯ ಅತ್ಯಮೂಲ್ಯ ಆಗರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.</p><p>ಹೊಸ ಜನಸಂಸ್ಕೃತಿ ಮತ್ತು ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಗೌತಮ ಬುದ್ಧ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳು ಮಹತ್ವದ ದಾರಿದೀಪಗಳಾಗಿವೆ ಎಂದು ರಮೇಶ್ ಪ್ರತಿಪಾದಿಸಿದರು.</p><p>ನ್ಯಾಕ್ ಸಂಸ್ಥೆಯ ನಿಕಟಪೂರ್ವ ನಿರ್ದೇಶಕ ಡಾ. ಎಸ್.ಸಿ. ಶರ್ಮಾ ಗ್ರಂಥ ಜನಾರ್ಪಣೆ ಮಾಡಿದರು. ಪುರಾತನ ಶಾಸ್ತ್ರೀಯ ಭಾಷೆಯಾದ ಪಾಲಿ ಭಾರತೀಯ ಸಂಸ್ಕೃತಿಯ ಮೇಲೆ ಅಗಾಧ ಪ್ರಭಾವ ಬೀರಿದೆ ಎಂದು ವಿವರಿಸಿದರು.</p><p>ಪಾಲಿ ಇನ್ ಸ್ಟಿಟ್ಯೂಟ್ ಗೌರವ ನಿರ್ದೇಶಕ ಪ್ರೊ. ಮಲ್ಲೇಪುರಂ. ಜಿ. ವೆಂಕಟೇಶ್ ಕನ್ನಡವವೂ ಸೇರಿದಂತೆ ದ್ರಾವಿಡ ಭಾಷೆಗಳ ಜೊತೆ ಪಾಲಿ ಭಾಷೆ ಹೊಕ್ಕುಬಳಕೆಯ ಮಹತ್ವ ತಿಳಿಸಿದರು.</p><p>ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ವೈ.ಎಸ್.ಸಿದ್ದೇಗೌಡರು ಮೌಲ್ಯಯುತ ಜೀವನದ ಮೂಲಾಧಾರವಾದ ಸಾಹಿತ್ಯದ ಪೋಷಣೆಗೆ ನಿಘಂಟುಗಳು ಪ್ರಮುಖ ಪಾತ್ರ ವಹಿಸುತ್ತವೆಂದು ಹೇಳಿದರು.</p><p>ಪಾಲಿ ಇನ್ ಸ್ಟಿಟ್ಯೂಟ್ ಅಧ್ಯಕ್ಷರಾದ ರಾಹುಲ್ ಎಂ.ಖರ್ಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕನ್ನಡ-ಪಾಲಿ-ಇಂಗ್ಲೀಷ್ ಭಾಷಾ ವಿದ್ವಾಂಸರಾದ ಸಿ.ಚಂದ್ರಮೋಹನ್ , ಬಿಸಿಯು ಕುಲಸಚಿವ ನವೀನ್ ಜೋಸೆಫ್, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕಿ ಕೆ.ಆರ್.ಜಲಜಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೌದ್ಧ ಧರ್ಮದ ತತ್ವ ಚಿಂತನೆಗಳ ಅಧ್ಯಯನಕ್ಕೆ ವಿಶೇಷ ಉತ್ತೇಜನ ನೀಡಲು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದೆಂದು ಕುಲಪತಿಗಳಾದ ಪ್ರೊ. ರಮೇಶ್.ಬಿ. ತಿಳಿಸಿದ್ದಾರೆ.</p><p>ಕಲಬುರಗಿಯ ಪಾಲಿ ಇನ್ ಸ್ಟಿಟ್ಯೂಟ್ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಪಾಲಿ-ಕನ್ನಡ ಶಬ್ದಕೋಶ ದ ನಾಲ್ಕನೆಯ ಸಂಪುಟದ ಜನಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.</p><p>ಕ್ರಿ.ಪೂ. 5ನೇ ಶತಮಾನದ ಕಾಲಘಟ್ಟದಲ್ಲಿ ಜನಬಳಕೆಯ ಭಾಷೆಯಾಗಿದ್ದ ಪಾಲಿ ಭಾಷೆ ಭಾರತೀಯ ಜ್ಞಾನ ಶಾಖೆಯ ಅತ್ಯಮೂಲ್ಯ ಆಗರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.</p><p>ಹೊಸ ಜನಸಂಸ್ಕೃತಿ ಮತ್ತು ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಗೌತಮ ಬುದ್ಧ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳು ಮಹತ್ವದ ದಾರಿದೀಪಗಳಾಗಿವೆ ಎಂದು ರಮೇಶ್ ಪ್ರತಿಪಾದಿಸಿದರು.</p><p>ನ್ಯಾಕ್ ಸಂಸ್ಥೆಯ ನಿಕಟಪೂರ್ವ ನಿರ್ದೇಶಕ ಡಾ. ಎಸ್.ಸಿ. ಶರ್ಮಾ ಗ್ರಂಥ ಜನಾರ್ಪಣೆ ಮಾಡಿದರು. ಪುರಾತನ ಶಾಸ್ತ್ರೀಯ ಭಾಷೆಯಾದ ಪಾಲಿ ಭಾರತೀಯ ಸಂಸ್ಕೃತಿಯ ಮೇಲೆ ಅಗಾಧ ಪ್ರಭಾವ ಬೀರಿದೆ ಎಂದು ವಿವರಿಸಿದರು.</p><p>ಪಾಲಿ ಇನ್ ಸ್ಟಿಟ್ಯೂಟ್ ಗೌರವ ನಿರ್ದೇಶಕ ಪ್ರೊ. ಮಲ್ಲೇಪುರಂ. ಜಿ. ವೆಂಕಟೇಶ್ ಕನ್ನಡವವೂ ಸೇರಿದಂತೆ ದ್ರಾವಿಡ ಭಾಷೆಗಳ ಜೊತೆ ಪಾಲಿ ಭಾಷೆ ಹೊಕ್ಕುಬಳಕೆಯ ಮಹತ್ವ ತಿಳಿಸಿದರು.</p><p>ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ವೈ.ಎಸ್.ಸಿದ್ದೇಗೌಡರು ಮೌಲ್ಯಯುತ ಜೀವನದ ಮೂಲಾಧಾರವಾದ ಸಾಹಿತ್ಯದ ಪೋಷಣೆಗೆ ನಿಘಂಟುಗಳು ಪ್ರಮುಖ ಪಾತ್ರ ವಹಿಸುತ್ತವೆಂದು ಹೇಳಿದರು.</p><p>ಪಾಲಿ ಇನ್ ಸ್ಟಿಟ್ಯೂಟ್ ಅಧ್ಯಕ್ಷರಾದ ರಾಹುಲ್ ಎಂ.ಖರ್ಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕನ್ನಡ-ಪಾಲಿ-ಇಂಗ್ಲೀಷ್ ಭಾಷಾ ವಿದ್ವಾಂಸರಾದ ಸಿ.ಚಂದ್ರಮೋಹನ್ , ಬಿಸಿಯು ಕುಲಸಚಿವ ನವೀನ್ ಜೋಸೆಫ್, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕಿ ಕೆ.ಆರ್.ಜಲಜಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>