<p><strong>ಬೆಂಗಳೂರು:</strong> ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹಾಗೂ ಬೆಂಗಳೂರು ಪಶ್ಚಿಮ ವಿಭಾಗದ ಅಬಕಾರಿ ಉಪ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ರಾಜ್ಯ ಅಬಕಾರಿ ಆಯುಕ್ತ ವಿ.ಯಶವಂತ್ ಮಂಗಳವಾರ ಉದ್ಘಾಟಿಸಿದರು.</p>.<p>ಅಬಕಾರಿ ಜಂಟಿ ಆಯುಕ್ತರ ಕಚೇರಿ ಈವರೆಗೂ ಜೆ.ಸಿ.ರಸ್ತೆಯ ಪೂರ್ಣಿಮಾ ಕಾಂಪ್ಲೆಕ್ಸ್ನ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಮೈಸೂರು ರಸ್ತೆ ಬ್ಯಾಟರಾಯನಪುರ ಪೊಲೀಸ್ ಠಾಣೆ ಬಳಿ ನಿರ್ಮಾಣವಾಗಿರುವ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.</p>.<p>ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ (ಕೆಎಸ್ಬಿಸಿಎಲ್) ಸಂಸ್ಥೆ ನಿರ್ಮಿಸಿದೆ.ನೆಲ ಮಹಡಿಯಲ್ಲಿ ಅಬಕಾರಿ ಜಂಟಿ ಆಯುಕ್ತರ ಕಚೇರಿ (ಜಾರಿ ಮತ್ತು ತನಿಖೆ) ಬೆಂಗಳೂರು ವಿಭಾಗ,ವಿಜಯನಗರ ಇಐಬಿ-2 ಅಬಕಾರಿ ಅಧೀಕ್ಷರ ಕಚೇರಿ,ಗಾಂಧಿನಗರ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರ ಕಚೇರಿ ಹಾಗೂಚಿಕ್ಕಪೇಟೆ ಅಬಕಾರಿ ನಿರೀಕ್ಷಕರ ಕಚೇರಿ ಇದೆ.</p>.<p>ಎರಡನೇ ಮಹಡಿಯಲ್ಲಿಬೆಂಗಳೂರುಪಶ್ಚಿಮ ಅಬಕಾರಿ ಉಪ ಆಯುಕ್ತರ ಕಚೇರಿ,ಹನುಮಂತನಗರ ಹಾಗೂ ಚಾಮರಾಜಪೇಟೆ ವಲಯಗಳಅಬಕಾರಿ ನಿರೀಕ್ಷಕರ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ನಗರ ಜಿಲ್ಲೆ ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್ ತಿಳಿಸಿದರು.</p>.<p>ಅಬಕಾರಿ ಜಂಟಿ ಆಯುಕ್ತ ಎಲ್.ನಾಗೇಶ್, ಅಪರ ಆಯುಕ್ತ (ಅಪರಾಧ) ವೆಂಕಟರಾಜು, ಕೆಎಸ್ಇಎಸ್ ಅಪರ ಆಯುಕ್ತ ಎಸ್.ಎಲ್.ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹಾಗೂ ಬೆಂಗಳೂರು ಪಶ್ಚಿಮ ವಿಭಾಗದ ಅಬಕಾರಿ ಉಪ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ರಾಜ್ಯ ಅಬಕಾರಿ ಆಯುಕ್ತ ವಿ.ಯಶವಂತ್ ಮಂಗಳವಾರ ಉದ್ಘಾಟಿಸಿದರು.</p>.<p>ಅಬಕಾರಿ ಜಂಟಿ ಆಯುಕ್ತರ ಕಚೇರಿ ಈವರೆಗೂ ಜೆ.ಸಿ.ರಸ್ತೆಯ ಪೂರ್ಣಿಮಾ ಕಾಂಪ್ಲೆಕ್ಸ್ನ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಮೈಸೂರು ರಸ್ತೆ ಬ್ಯಾಟರಾಯನಪುರ ಪೊಲೀಸ್ ಠಾಣೆ ಬಳಿ ನಿರ್ಮಾಣವಾಗಿರುವ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.</p>.<p>ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ (ಕೆಎಸ್ಬಿಸಿಎಲ್) ಸಂಸ್ಥೆ ನಿರ್ಮಿಸಿದೆ.ನೆಲ ಮಹಡಿಯಲ್ಲಿ ಅಬಕಾರಿ ಜಂಟಿ ಆಯುಕ್ತರ ಕಚೇರಿ (ಜಾರಿ ಮತ್ತು ತನಿಖೆ) ಬೆಂಗಳೂರು ವಿಭಾಗ,ವಿಜಯನಗರ ಇಐಬಿ-2 ಅಬಕಾರಿ ಅಧೀಕ್ಷರ ಕಚೇರಿ,ಗಾಂಧಿನಗರ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರ ಕಚೇರಿ ಹಾಗೂಚಿಕ್ಕಪೇಟೆ ಅಬಕಾರಿ ನಿರೀಕ್ಷಕರ ಕಚೇರಿ ಇದೆ.</p>.<p>ಎರಡನೇ ಮಹಡಿಯಲ್ಲಿಬೆಂಗಳೂರುಪಶ್ಚಿಮ ಅಬಕಾರಿ ಉಪ ಆಯುಕ್ತರ ಕಚೇರಿ,ಹನುಮಂತನಗರ ಹಾಗೂ ಚಾಮರಾಜಪೇಟೆ ವಲಯಗಳಅಬಕಾರಿ ನಿರೀಕ್ಷಕರ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಬೆಂಗಳೂರು ನಗರ ಜಿಲ್ಲೆ ಅಬಕಾರಿ ಉಪ ಆಯುಕ್ತ ಬಿ.ಆರ್.ಹಿರೇಮಠ್ ತಿಳಿಸಿದರು.</p>.<p>ಅಬಕಾರಿ ಜಂಟಿ ಆಯುಕ್ತ ಎಲ್.ನಾಗೇಶ್, ಅಪರ ಆಯುಕ್ತ (ಅಪರಾಧ) ವೆಂಕಟರಾಜು, ಕೆಎಸ್ಇಎಸ್ ಅಪರ ಆಯುಕ್ತ ಎಸ್.ಎಲ್.ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>