<p><strong>ಬೆಂಗಳೂರು: </strong>ಸುಂಕೇನಹಳ್ಳಿ ವಾರ್ಡ್ನಲ್ಲಿ ನ್ಯಾಷನಲ್ ಕಾಲೇಜು ಆಟದ ಮೈದಾನಕ್ಕೆ ಹೊಂದಿಕೊಂಡಿರುವ ಬುಲೇವಾರ್ಡ್ ಜಾಗವನ್ನು ಕನ್ನಡ ಸಾಹಿತ್ಯ ಪರಿಷತ್ನಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ನೀಡುವ ಪ್ರಸ್ತಾಪವನ್ನು ಬಿಬಿಎಂಪಿ ತಿರಸ್ಕರಿಸಿದೆ.</p>.<p>‘ಅದು ಉದ್ಯಾನದ ಜಾಗ. ಹಾಗಾಗಿ ಅನ್ಯ ಉದ್ದೇಶಕ್ಕೆ ನೀಡಲು ಸಾಧ್ಯವಿಲ್ಲ. ಹಾಗಾಗಿ ಕನ್ನಡ ಸಾಹಿತ್ಯ ಪರಿಷತ್ನ ನಗರ ಜಿಲ್ಲಾ ಘಟಕದ ಮನವಿಯನ್ನು ತಿರಸ್ಕರಿಸಿದ್ದೇವೆ. ಸಾಹಿತ್ಯ ಪರಿಷತ್ಗೆ ಇದಕ್ಕಿಂತಲೂ ಉತ್ತಮವಾದ ಜಾಗವನ್ನು ನೀಡುತ್ತೇವೆ’ ಎಂದು ಮೇಯರ್ ಎಂ.ಗೌತಮ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೆ.ಆರ್.ರಸ್ತೆ ಪಕ್ಕದಲ್ಲಿರುವ 142 x47 ಅಡಿ ಜಾಗವನ್ನು ನೀಡುವಂತೆ ಪರಿಷತ್ತಿನಬೆಂಗಳೂರು ನಗರ ಜಿಲ್ಲಾ ಘಟಕವು ಮೂರು ವರ್ಷಗಳ ಹಿಂದೆ ಪಾಲಿಕೆಯನ್ನು ಕೋರಿತ್ತು. ’ಅದು ಪಾಲಿಕೆಯ ಬುಲೇವಾರ್ಡ್ ಜಾಗ. ಇಲ್ಲಿ ಈ ಹಿಂದೆ ಸಾಕಷ್ಟು ಮರಗಳಿದ್ದವು. ಮೆಟ್ರೊ ಕಾಮಗಾರಿ ಸಲುವಾಗಿ ಈ ಜಾಗವನ್ನು ಬಿಟ್ಟು ಕೊಡಲಾಗಿತ್ತು. ಅಲ್ಲಿ ಮತ್ತೆ ಬುಲೇವಾರ್ಡ್ ನಿರ್ಮಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದರು.</p>.<p>‘ಇಲ್ಲಿ ಜಲಮಂಡಳಿ ಕಚೇರಿಯಿಂದ ಮಹಿಳಾ ಸಮಾಜ ಶಾಲೆಯವರೆಗೂ ಉದ್ಯಾನ ಇತ್ತು. ಮೆಟ್ರೊ ನಿಲ್ದಾಣಕ್ಕಾಗಿ ಸಾಕಷ್ಟು ಮರಗಳನ್ನು ಕಳೆದುಕೊಂಡಿದ್ದೇವೆ. ಇಲ್ಲಿ ಮತ್ತಷ್ಟು ಕಟ್ಟಡ ಬರುವುದು ಬೇಡ ಎಂಬ ಕಾರಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಈ ಜಾಗದ ಬದಲು ಬೇರೆ ಜಾಗ ನೀಡುವಂತೆ ಕೋರಿದ್ದೆವು. ನಮ್ಮ ಬೇಡಿಕೆಯನ್ನು ಪಾಲಿಕೆ ಕೊನೆಗೂ ಮನ್ನಿಸಿರುವುದು ತೃಪ್ತಿ ತಂದಿದೆ’ ಎಂದು ಸ್ಥಳೀಯ ನಿವಾಸಿ ಕೆ.ಮುರಳೀಧರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ನಗರಾಭಿವೃದ್ಧಿ ಇಲಾಖೆಯು 2011ರಲ್ಲೇ ಕರ್ನಾಟಕ ಉದ್ಯಾನಗಳು, ಆಟದ ಮೈದಾನಗಳು ಮತ್ತು ಬಯಲು ಪ್ರದೇಶ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ– 1985ರ ಪ್ರಕಾರ ಪಾಲಿಕೆ ವ್ಯಾಪ್ತಿಯ ಉದ್ಯಾನ ಹಾಗೂ ಆಟದ ಮೈದಾನಗಳನ್ನು ಗುರುತಿಸಿ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಉದ್ಯಾನಗಳ ಪಟ್ಟಿಯಲ್ಲಿ ಕೆ.ಆರ್.ರಸ್ತೆ ಪಕ್ಕದ ಬುಲೇವಾರ್ಡ್ಗಳೂ ಸೇರಿವೆ. ಉದ್ಯಾನ ಎಂದು ಗುರುತಿಸಿದ ಜಾಗವನ್ನು ಮಾರಾಟ ಮಾಡುವುದು, ಉಡುಗೊರೆ ನೀಡುವುದು, ಅಡಮಾನ ಇಡುವುದು, ಭೋಗ್ಯಕ್ಕೆ ಅಥವಾ ಬಾಡಿಗೆಗೆ ನೀಡುವುದಕ್ಕೆ ಅವಕಾಶವಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸುಂಕೇನಹಳ್ಳಿ ವಾರ್ಡ್ನಲ್ಲಿ ನ್ಯಾಷನಲ್ ಕಾಲೇಜು ಆಟದ ಮೈದಾನಕ್ಕೆ ಹೊಂದಿಕೊಂಡಿರುವ ಬುಲೇವಾರ್ಡ್ ಜಾಗವನ್ನು ಕನ್ನಡ ಸಾಹಿತ್ಯ ಪರಿಷತ್ನಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ನೀಡುವ ಪ್ರಸ್ತಾಪವನ್ನು ಬಿಬಿಎಂಪಿ ತಿರಸ್ಕರಿಸಿದೆ.</p>.<p>‘ಅದು ಉದ್ಯಾನದ ಜಾಗ. ಹಾಗಾಗಿ ಅನ್ಯ ಉದ್ದೇಶಕ್ಕೆ ನೀಡಲು ಸಾಧ್ಯವಿಲ್ಲ. ಹಾಗಾಗಿ ಕನ್ನಡ ಸಾಹಿತ್ಯ ಪರಿಷತ್ನ ನಗರ ಜಿಲ್ಲಾ ಘಟಕದ ಮನವಿಯನ್ನು ತಿರಸ್ಕರಿಸಿದ್ದೇವೆ. ಸಾಹಿತ್ಯ ಪರಿಷತ್ಗೆ ಇದಕ್ಕಿಂತಲೂ ಉತ್ತಮವಾದ ಜಾಗವನ್ನು ನೀಡುತ್ತೇವೆ’ ಎಂದು ಮೇಯರ್ ಎಂ.ಗೌತಮ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೆ.ಆರ್.ರಸ್ತೆ ಪಕ್ಕದಲ್ಲಿರುವ 142 x47 ಅಡಿ ಜಾಗವನ್ನು ನೀಡುವಂತೆ ಪರಿಷತ್ತಿನಬೆಂಗಳೂರು ನಗರ ಜಿಲ್ಲಾ ಘಟಕವು ಮೂರು ವರ್ಷಗಳ ಹಿಂದೆ ಪಾಲಿಕೆಯನ್ನು ಕೋರಿತ್ತು. ’ಅದು ಪಾಲಿಕೆಯ ಬುಲೇವಾರ್ಡ್ ಜಾಗ. ಇಲ್ಲಿ ಈ ಹಿಂದೆ ಸಾಕಷ್ಟು ಮರಗಳಿದ್ದವು. ಮೆಟ್ರೊ ಕಾಮಗಾರಿ ಸಲುವಾಗಿ ಈ ಜಾಗವನ್ನು ಬಿಟ್ಟು ಕೊಡಲಾಗಿತ್ತು. ಅಲ್ಲಿ ಮತ್ತೆ ಬುಲೇವಾರ್ಡ್ ನಿರ್ಮಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದರು.</p>.<p>‘ಇಲ್ಲಿ ಜಲಮಂಡಳಿ ಕಚೇರಿಯಿಂದ ಮಹಿಳಾ ಸಮಾಜ ಶಾಲೆಯವರೆಗೂ ಉದ್ಯಾನ ಇತ್ತು. ಮೆಟ್ರೊ ನಿಲ್ದಾಣಕ್ಕಾಗಿ ಸಾಕಷ್ಟು ಮರಗಳನ್ನು ಕಳೆದುಕೊಂಡಿದ್ದೇವೆ. ಇಲ್ಲಿ ಮತ್ತಷ್ಟು ಕಟ್ಟಡ ಬರುವುದು ಬೇಡ ಎಂಬ ಕಾರಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿಗೆ ಈ ಜಾಗದ ಬದಲು ಬೇರೆ ಜಾಗ ನೀಡುವಂತೆ ಕೋರಿದ್ದೆವು. ನಮ್ಮ ಬೇಡಿಕೆಯನ್ನು ಪಾಲಿಕೆ ಕೊನೆಗೂ ಮನ್ನಿಸಿರುವುದು ತೃಪ್ತಿ ತಂದಿದೆ’ ಎಂದು ಸ್ಥಳೀಯ ನಿವಾಸಿ ಕೆ.ಮುರಳೀಧರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ನಗರಾಭಿವೃದ್ಧಿ ಇಲಾಖೆಯು 2011ರಲ್ಲೇ ಕರ್ನಾಟಕ ಉದ್ಯಾನಗಳು, ಆಟದ ಮೈದಾನಗಳು ಮತ್ತು ಬಯಲು ಪ್ರದೇಶ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ– 1985ರ ಪ್ರಕಾರ ಪಾಲಿಕೆ ವ್ಯಾಪ್ತಿಯ ಉದ್ಯಾನ ಹಾಗೂ ಆಟದ ಮೈದಾನಗಳನ್ನು ಗುರುತಿಸಿ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ಉದ್ಯಾನಗಳ ಪಟ್ಟಿಯಲ್ಲಿ ಕೆ.ಆರ್.ರಸ್ತೆ ಪಕ್ಕದ ಬುಲೇವಾರ್ಡ್ಗಳೂ ಸೇರಿವೆ. ಉದ್ಯಾನ ಎಂದು ಗುರುತಿಸಿದ ಜಾಗವನ್ನು ಮಾರಾಟ ಮಾಡುವುದು, ಉಡುಗೊರೆ ನೀಡುವುದು, ಅಡಮಾನ ಇಡುವುದು, ಭೋಗ್ಯಕ್ಕೆ ಅಥವಾ ಬಾಡಿಗೆಗೆ ನೀಡುವುದಕ್ಕೆ ಅವಕಾಶವಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>