ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನ: ನಗರದ ಹೊರವಲಯದಲ್ಲಿ 10 ಕಡೆ ಜಾಗ

Last Updated 2 ಜುಲೈ 2020, 21:03 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹೊರವಲಯಗಳಲ್ಲಿ ಸ್ಮಶಾನಗಳಿಗೆ 10 ಕಡೆ ಒಟ್ಟು 35 ಎಕರೆ 18 ಗುಂಟೆ ಸರ್ಕಾರಿ ಜಾಗವನ್ನು ನಗರ ಜಿಲ್ಲಾಡಳಿತ ಗುರುತಿಸಿದೆ. ‌

‘ತಹಶೀಲ್ದಾರ್‌ಗಳು ಸ್ಮಶಾನಕ್ಕೆ ಗುರುತಿಸಿದ ಜಾಗಗಳ ಸರ್ವೆ ನಂಬರ್‌ ಪ್ರಕಾರ ಪ್ರತ್ಯೇಕ ಪ್ರಸ್ತಾವನೆ ಸಿದ್ಧಪಡಿಸಿ ಅನುಮೋದನೆ ಪಡೆಯಬೇಕು. ಈ ಜಾಗಗಳ ಗಡಿ ಗುರುತು ಮಾಡಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಹಸ್ತಾಂತರಿಸಬೇಕು. ಈ ಜಾಗಗಳು ಒತ್ತುವರಿ ಆಗದಂತೆ ತಡೆಯಲು ಕಂದಾಯ ಅಧಿಕಾರಿಗಳು ತಂತಿ ಬೇಲಿ ಹಾಕಿಸಬೇಕು’ ಎಂದು ನಗರ ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಆದೇಶ ಮಾಡಿದ್ದಾರೆ.

ನಗರದಲ್ಲಿರುವ ಸ್ಮಶಾನಗಳಲ್ಲಿ ಮೃತದೇಹಗಳ ಅಂತ್ಯಸಂಸ್ಕಾರ ಮಾಡಲು ಸ್ಥಳಾವಕಾಶದ ಕೊರತೆ ಎದುರಾಗಿತ್ತು. ನಗರದ ಹೊರವಲಯಗಳಲ್ಲಿ ಸ್ಮಶಾನಕ್ಕೆ ಜಾಗ ಗುರುತಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT