ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಸ್ಗಳಲ್ಲಿ ಸಂಚರಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
‘ಅಬ್ದುಲ್ ರಹೀಂಖಾನ್ (27) ಹಾಗೂ ಮಣಿ (21) ಬಂಧಿತರು. ಇವರಿಂದ ₹ 1.20 ಲಕ್ಷ ಮೌಲ್ಯದ ಚಿನ್ನಾಭರಣ, ನಾಲ್ಕು ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಬಸ್ಗಳಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಹಾಗೂ ಮೊಬೈಲ್ ಕದಿಯುತ್ತಿದ್ದರು. ತಂಗುದಾಣಗಳಲ್ಲಿ ಇಳಿದು ಪರಾರಿಯಾಗುತ್ತಿದ್ದರು. ಉಪ್ಪಾರಪೇಟೆ, ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದರು.