<p><strong>ಬೆಂಗಳೂರು: </strong>ಬಿಟಿಎಂ ಲೇಔಟ್ ಹಾಗೂ ಬನಶಂಕರಿಯಿಂದ ಮೆಜೆಸ್ಟಿಕ್ಗೆ ಹೋಗುವ ಬಿಎಂಟಿಸಿ ಬಸ್ಗಳ ಸಂಚಾರವನ್ನು ಶನಿವಾರ ರಾತ್ರಿಯೇ ಸ್ಥಗಿತಗೊಳಿಸಲಾಗಿತ್ತು.</p>.<p>ನಿತ್ಯದ ಕೆಲಸ ಮುಗಿಸಿ ಮನೆಗೆ ಹೋಗುವ ಹಾಗೂ ಅಗತ್ಯ ವಸ್ತುಗಳನ್ನು ತರಲು ಮಾರುಕಟ್ಟೆಗೆ ಹೋಗುವ ಜನ ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ರಾತ್ರಿ 8ಕ್ಕೆ ಬಸ್ಗಳ ಕೊನೆಯ ಟ್ರಿಪ್ ಮುಕ್ತಾಯವಾಯಿತೆಂದು ಬಿಎಂಟಿಸಿ ಸಿಬ್ಬಂದಿ ಹೇಳಿದರು.</p>.<p>‘ಭಾನುವಾರ ಬೆಳಿಗ್ಗೆಯಿಂದ ಜನತಾ ಕರ್ಫ್ಯೂ ಇದೆ. ಮುನ್ನಾದಿನವಾದ ಶನಿವಾರ ರಾತ್ರಿಯೇ ಬಸ್ಗಳ<br />ಸಂಚಾರ ಬಂದ್ ಮಾಡಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು’ ಎಂದು ಪ್ರಯಾಣಿಕ ಕೃಷ್ಣಮೂರ್ತಿ ದೂರಿದರು.</p>.<p>ಭಾನುವಾರ ಜನತಾ ಕರ್ಫ್ಯೂ ನಡೆಯಲಿದ್ದು, ನಗರದಲ್ಲಿ ನೆಲೆಸಿರುವ ಹಲವರು ಶನಿವಾರ ರಾತ್ರಿಯೇ ತಮ್ಮ ಊರುಗಳತ್ತ ಹೊರಟರು. ಇದರಿಂದಾಗಿ ರಾತ್ರಿ ಹಲವೆಡೆ ಸಂಚಾರ ದಟ್ಟಣೆ ಉಂಟಾಯಿತು.</p>.<p class="Subhead"><strong>ಮೆಜೆಸ್ಟಿಕ್ ಸುತ್ತ ದಟ್ಟಣೆ: </strong>ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಹೆಚ್ಚಿನ ಜನ ಸೇರಿದ್ದರು. ಈ ಭಾಗದಲ್ಲಿ ದಟ್ಟಣೆ ಹೆಚ್ಚಿತ್ತು. ಆನಂದರಾವ್ ವೃತ್ತ, ಚಾಲುಕ್ಯ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್ಎಂಸಿ ಯಾರ್ಡ್, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲೂ ದಟ್ಟಣೆ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಟಿಎಂ ಲೇಔಟ್ ಹಾಗೂ ಬನಶಂಕರಿಯಿಂದ ಮೆಜೆಸ್ಟಿಕ್ಗೆ ಹೋಗುವ ಬಿಎಂಟಿಸಿ ಬಸ್ಗಳ ಸಂಚಾರವನ್ನು ಶನಿವಾರ ರಾತ್ರಿಯೇ ಸ್ಥಗಿತಗೊಳಿಸಲಾಗಿತ್ತು.</p>.<p>ನಿತ್ಯದ ಕೆಲಸ ಮುಗಿಸಿ ಮನೆಗೆ ಹೋಗುವ ಹಾಗೂ ಅಗತ್ಯ ವಸ್ತುಗಳನ್ನು ತರಲು ಮಾರುಕಟ್ಟೆಗೆ ಹೋಗುವ ಜನ ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ರಾತ್ರಿ 8ಕ್ಕೆ ಬಸ್ಗಳ ಕೊನೆಯ ಟ್ರಿಪ್ ಮುಕ್ತಾಯವಾಯಿತೆಂದು ಬಿಎಂಟಿಸಿ ಸಿಬ್ಬಂದಿ ಹೇಳಿದರು.</p>.<p>‘ಭಾನುವಾರ ಬೆಳಿಗ್ಗೆಯಿಂದ ಜನತಾ ಕರ್ಫ್ಯೂ ಇದೆ. ಮುನ್ನಾದಿನವಾದ ಶನಿವಾರ ರಾತ್ರಿಯೇ ಬಸ್ಗಳ<br />ಸಂಚಾರ ಬಂದ್ ಮಾಡಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು’ ಎಂದು ಪ್ರಯಾಣಿಕ ಕೃಷ್ಣಮೂರ್ತಿ ದೂರಿದರು.</p>.<p>ಭಾನುವಾರ ಜನತಾ ಕರ್ಫ್ಯೂ ನಡೆಯಲಿದ್ದು, ನಗರದಲ್ಲಿ ನೆಲೆಸಿರುವ ಹಲವರು ಶನಿವಾರ ರಾತ್ರಿಯೇ ತಮ್ಮ ಊರುಗಳತ್ತ ಹೊರಟರು. ಇದರಿಂದಾಗಿ ರಾತ್ರಿ ಹಲವೆಡೆ ಸಂಚಾರ ದಟ್ಟಣೆ ಉಂಟಾಯಿತು.</p>.<p class="Subhead"><strong>ಮೆಜೆಸ್ಟಿಕ್ ಸುತ್ತ ದಟ್ಟಣೆ: </strong>ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಹೆಚ್ಚಿನ ಜನ ಸೇರಿದ್ದರು. ಈ ಭಾಗದಲ್ಲಿ ದಟ್ಟಣೆ ಹೆಚ್ಚಿತ್ತು. ಆನಂದರಾವ್ ವೃತ್ತ, ಚಾಲುಕ್ಯ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್ಎಂಸಿ ಯಾರ್ಡ್, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲೂ ದಟ್ಟಣೆ ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>