‘ಆರೋಪಿಗಳು ಊಟ ತರಲು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಗೋದಾಮಿನಲ್ಲಿದ್ದ ಫೋನ್ನಿಂದ ಅಭಿಲಾಷ್ ಅವರು ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು. ತ್ವರಿತ ಕಾರ್ಯಾಚರಣೆ ನಡೆಸಿ, ಉದ್ಯಮಿಯನ್ನು ರಕ್ಷಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಸದ್ಯದಲ್ಲೇ ಸಂಪಿಗೆಹಳ್ಳಿಗೆ ವರ್ಗಾಯಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.