ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು| ₹ 1.50 ಕೋಟಿ ವ್ಯವಹಾರ: ಉದ್ಯಮಿ ಅಪಹರಣ

Published 24 ಅಕ್ಟೋಬರ್ 2023, 15:50 IST
Last Updated 24 ಅಕ್ಟೋಬರ್ 2023, 15:50 IST
ಅಕ್ಷರ ಗಾತ್ರ

ಬೆಂಗಳೂರು: ಉದ್ಯಮಿ ಅಭಿಲಾಷ್ ಎಂಬುವವರನ್ನು ಅಪಹರಿಸಿ ₹ 50 ಲಕ್ಷಕ್ಕೆ ಬೇಡಿಕೆ ಇರಿಸಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸಂಪಿಗೆಹಳ್ಳಿಯ ನಿವಾಸಿ ಅಭಿಲಾಷ್ ಅವರು ಮಹಿಳೆಯೊಬ್ಬರ ಪಾಲುದಾರಿಕೆಯಲ್ಲಿ ಉದ್ಯಮ ನಡೆಸುತ್ತಿದ್ದರು. ಅವರಿಬ್ಬರ ನಡುವೆ ₹ 1.50 ಕೋಟಿ ವ್ಯವಹಾರವಿತ್ತು. ಇದೇ ಹಣಕ್ಕೆ ಸಂಬಂಧಪಟ್ಟಂತೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅ.20 ರಂದು ರಾತ್ರಿ ಅಭಿಲಾಷ್ ಅವರನ್ನು​ ಅಪಹರಿಸಿದ್ದ ಆರೋಪಿಗಳು, ರಾಮಮೂರ್ತಿನಗರದ ಗೋದಾಮುವೊಂದರಲ್ಲಿ ಅಕ್ರಮ ಬಂಧನದಲ್ಲಿರಿಸಿದ್ದರು. ಚಾಕು ತೋರಿಸಿ, ₹ 50 ಲಕ್ಷ ನೀಡಿದರೆ ಮಾತ್ರ ಬಿಡುಗಡೆ ಮಾಡುವುದಾಗಿ ಬೆದರಿಸಿದ್ದರು.’

‘ಆರೋಪಿಗಳು ಊಟ ತರಲು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಗೋದಾಮಿನಲ್ಲಿದ್ದ ಫೋನ್‌ನಿಂದ ಅಭಿಲಾಷ್ ಅವರು ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು. ತ್ವರಿತ ಕಾರ್ಯಾಚರಣೆ ನಡೆಸಿ, ಉದ್ಯಮಿಯನ್ನು ರಕ್ಷಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಸದ್ಯದಲ್ಲೇ ಸಂಪಿಗೆಹಳ್ಳಿಗೆ ವರ್ಗಾಯಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT