ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಇ ಬದಲಾವಣೆ ಇಲ್ಲ: ಸೇಠ್

Last Updated 30 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್‌ಟಿಇ (ಕಡ್ಡಾಯ ಶಿಕ್ಷಣ ಹಕ್ಕು) ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಳೆಯ ಮಾದರಿಯಲ್ಲೇ ಆರ್‌ಟಿಇ ಪಾಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ಆರ್‌ಟಿಇ ಅರ್ಜಿ ಸಲ್ಲಿಸಬೇಕಾದ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ’ ಎಂದರು.

ಮೊದಲು ಸರ್ಕಾರಿ ಶಾಲೆಗೆ ಸೇರಿಸಲಿ!

ಸಾಹಿತಿಗಳು ಮತ್ತು ಕನ್ನಡ ಸಂಘಟನೆಗಳ ಮುಖಂಡರು ತಮ್ಮ ಮಕ್ಕಳನ್ನು ಮೊದಲು ಸರ್ಕಾರಿ ಶಾಲೆಗಳಿಗೆ ಸೇರಿಸಲಿ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಕನ್ನಡ ಕಲಿಸದ ಶಾಲೆಗಳ ಮೇಲೆ ನಿಯಂತ್ರಣ ಸಾಧಿಸಲು ₹500 ದಂಡ ವಿಧಿಸಲಾಗುತ್ತಿದೆಯೇ ಹೊರತು, ಹಣ ಸಂಗ್ರಹಿಸಲು ಅಲ್ಲ. ಕನ್ನಡ ಬೆಳೆಸುವುದು ಮಾತ್ರ ನಮ್ಮ ಉದ್ದೇಶ. ಆರೋಪ ಮಾಡುವವರು ಮತ್ತು ದಂಡದ ಪ್ರಮಾಣ ಕಡಿಮೆ ಇದೆ ಎನ್ನುವವರು ಇದನ್ನು ಅರ್ಥ ಮಾಡಿಕೊಳ್ಳಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT