ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಿದ್ವಾಯಿ: ಚಿಟ್ಟೆ ಉದ್ಯಾನವನ ನಿರ್ಮಾಣ: ನಿರ್ದೇಶಕ ಡಾ.ಸಿ. ರಾಮಚಂದ್ರ

Last Updated 4 ಜೂನ್ 2022, 20:03 IST
ಅಕ್ಷರ ಗಾತ್ರ

ಬೆಂಗಳೂರು:‘ಕ್ಯಾನ್ಸರ್ ರೋಗಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಆಹ್ಲಾದಕರ ವಾತಾವರಣ ನಿರ್ಮಿಸಲುಶೀಘ್ರದಲ್ಲಿಯೇ ಚಿಟ್ಟೆ ಹಾಗೂ ಪಕ್ಷಿಗಳ ಉದ್ಯಾನವನ ನಿರ್ಮಾಣ ಮಾಡಲಾಗುವುದು’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ಡಾ.ಸಿ. ರಾಮಚಂದ್ರ ತಿಳಿಸಿದ್ದಾರೆ.

ವಿಶ್ವಪರಿಸರ ದಿನದ ಪ್ರಯುಕ್ತ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ‘ಕ್ಯಾನ್ಸರ್ ರೋಗಿಗಳು ಮಾನಸಿಕವಾಗಿ ಕುಗ್ಗಿ, ಆತ್ಮಸ್ಥೈರ್ಯ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ, ಆಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಿಸಲು ಉದ್ಯಾನ ನಿರ್ಮಿಸಲಾಗಿದೆ.ಲಕ್ಷ್ಮಣಫಲ, ರಾಮಫಲ, ಸೀತಾಫಲ, ಬಕುಳ, ಪುನಗ, ರುದ್ರಾಕ್ಷಿ ಸೇರಿದಂತೆ ವಿವಿಧ ತಳಿಯ ಗಿಡಗಳು ಹಾಗೂ ಔಷಧ ಸಸ್ಯಗಳನ್ನು ಬೆಳೆಸಲಾಗಿದೆ’ ಎಂದು ಹೇಳಿದ್ದಾರೆ.

‘ಎಲ್ಲೆಡೆ ಹೂವು ಹಾಗೂ ಹಣ್ಣಿನ ಗಿಡಗಳನ್ನು ನೆಡಲಾಗುತ್ತಿದೆ.42 ಸಾವಿರ ಸಸ್ಯ ಸಂಕುಲ ಸಂಸ್ಥೆಯಲ್ಲಿದೆ. ಇದರಿಂದ ವಾತಾವರಣದಲ್ಲಿನ ತಾಪಮಾನ ಕೂಡ ಇಳಿಕೆಯಾಗಿ, ಶುದ್ಧಗಾಳಿ ದೊರೆಯುತ್ತಿದೆ.ಸಂಸ್ಥೆಯ ಆವರಣದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT