<p><strong>ಬೆಂಗಳೂರು:</strong> ಇನ್ನು ಮುಂದೆ ಕಟ್ಟಡಗಳ ನಿರ್ಮಾಣಕ್ಕೆ ಅಂತರ್ಜಲ ಅಥವಾ ಕಾವೇರಿ ನೀರು ಬಳಸಿದರೆ ಬಿಬಿಎಂಪಿಯಿಂದ ಸ್ವಾಧೀನಾನುಭವ ಪತ್ರ (ಒ.ಸಿ) ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಕಟ್ಟಡಗಳ ನಿರ್ಮಾಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಖರೀದಿಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.</p>.<p>‘ಕಟ್ಟಡಗಳ ನಿರ್ಮಾಣಕ್ಕೆ ಸಂಸ್ಕರಿಸಿದ ನೀರು ಖರೀದಿಸಿರುವ ರಸೀದಿ ಸಲ್ಲಿಸದ ಹೊರತು ಹೊಸ ಕಟ್ಟಡದ ಯೋಜನೆಗಳಿಗೆ ಅನುಮೋದನೆ ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ನೀಡಬಾರದು’ ಎಂದು ಬಿಬಿಎಂಪಿಗೆ ಜಲಮಂಡಳಿ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿರುವ ಪಾಲಿಕೆ ಈ ಆದೇಶ ಹೊರಡಿಸಿದೆ.</p>.<p>‘ಕಟ್ಟಡ ಯೋಜನೆಗಳಿಗೆ ಅನುಮೋದನೆ, ಆರಂಭಿಕ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಬಿಬಿಎಂಪಿಯ 8 ವಲಯಗಳ ಮುಖ್ಯ ಎಂಜಿನಿಯರ್ಗಳಿಗೆ ನಗರ ಯೋಜನೆಯ ಹೆಚ್ಚುವರಿ ನಿರ್ದೇಶಕ ಆರ್. ಪ್ರಸಾದ್ ಅವರು ಪತ್ರ ಬರೆದಿದ್ದಾರೆ.</p>.<p>‘ಹೊಸ ಆದೇಶದಂತೆ ಜಲಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಖರೀದಿಸಲಾಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಯೇ ಪ್ರಾರಂಭಿಕ ಪ್ರಮಾಣಪತ್ರಗಳ (ಸಿ.ಸಿ) ವಿತರಣೆ ಮಾಡಲಾಗುತ್ತಿದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಎರಡು ಸ್ಥಳೀಯ ಸಂಸ್ಥೆಗಳು ಸೇರಿ ಕೈಗೊಂಡಿರುವ ಈ ನಿರ್ಧಾರದಿಂದ ಅಂತರ್ಜಲ ಮತ್ತು ಕಾವೇರಿ ನೀರನ್ನು ಸಂರಕ್ಷಿಸಲು ಸಾಧ್ಯವಾಗಲಿದೆ. ಈ ನೀರನ್ನು ಅಗತ್ಯ ಇರುವ ಕಡೆಗೆ ಬಳಸಿಕೊಳ್ಳಬಹುದು’ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದರು.</p>.<p>‘ಬಿಬಿಎಂಪಿ ನೀಡಿರುವ ಸಹಕಾರದಿಂದ ಕುಡಿಯುವ ನೀರಿನ ಉಳಿತಾಯಕ್ಕೆ ಸಹಕಾರಿಯಾಗಲಿದೆ’ ಎಂದು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಹೇಳಿದರು.</p>.<p>ಜಲ ಮಂಡಳಿಯ ಅಂಕಿ–ಅಂಶಗಳ ಪ್ರಕಾರ, ನಗರದಲ್ಲಿ ಜಲಮಂಡಳಿಯ 16 ಒಳಚರಂಡಿ ಸಂಸ್ಕರಣಾ ಘಟಕಗಳಿದ್ದು (ಎಸ್ಟಿಪಿ), ಈ ಪೈಕಿ 9 ಎಸ್ಟಿಪಿಗಳಲ್ಲಿ 27.1 ದಶಲಕ್ಷ ಲೀಟರ್ ನೀರನ್ನು ಸಂಸ್ಕರಿಸಲಾಗುತ್ತಿದೆ. ಈ ನೀರನ್ನು ಕಟ್ಟಡಗಳ ನಿರ್ಮಾಣ ಮತ್ತು ಇತರೆ ಕೆಲಸಕ್ಕೆ ಬಳಸಿದರೆ ಕಾವೇರಿ ನೀರಿನ ಮೇಲಿನ ಒತ್ತಡ ಕಡಿಮೆಯಾಗಲಿದೆ.</p>.<p>ಈ ಕುರಿತು ನಿಯಮ ಇಲ್ಲದ ಕಾರಣ ಕುಡಿಯಲು ಯೋಗ್ಯವಾದ ಅಂತರ್ಜಲ ಮತ್ತು ಕಾವೇರಿ ನೀರನ್ನೇ ಕಟ್ಟಡಗಳ ನಿರ್ಮಾಣಕ್ಕೆ ಬಳಸಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇನ್ನು ಮುಂದೆ ಕಟ್ಟಡಗಳ ನಿರ್ಮಾಣಕ್ಕೆ ಅಂತರ್ಜಲ ಅಥವಾ ಕಾವೇರಿ ನೀರು ಬಳಸಿದರೆ ಬಿಬಿಎಂಪಿಯಿಂದ ಸ್ವಾಧೀನಾನುಭವ ಪತ್ರ (ಒ.ಸಿ) ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಕಟ್ಟಡಗಳ ನಿರ್ಮಾಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಖರೀದಿಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.</p>.<p>‘ಕಟ್ಟಡಗಳ ನಿರ್ಮಾಣಕ್ಕೆ ಸಂಸ್ಕರಿಸಿದ ನೀರು ಖರೀದಿಸಿರುವ ರಸೀದಿ ಸಲ್ಲಿಸದ ಹೊರತು ಹೊಸ ಕಟ್ಟಡದ ಯೋಜನೆಗಳಿಗೆ ಅನುಮೋದನೆ ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ನೀಡಬಾರದು’ ಎಂದು ಬಿಬಿಎಂಪಿಗೆ ಜಲಮಂಡಳಿ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿರುವ ಪಾಲಿಕೆ ಈ ಆದೇಶ ಹೊರಡಿಸಿದೆ.</p>.<p>‘ಕಟ್ಟಡ ಯೋಜನೆಗಳಿಗೆ ಅನುಮೋದನೆ, ಆರಂಭಿಕ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದು ಬಿಬಿಎಂಪಿಯ 8 ವಲಯಗಳ ಮುಖ್ಯ ಎಂಜಿನಿಯರ್ಗಳಿಗೆ ನಗರ ಯೋಜನೆಯ ಹೆಚ್ಚುವರಿ ನಿರ್ದೇಶಕ ಆರ್. ಪ್ರಸಾದ್ ಅವರು ಪತ್ರ ಬರೆದಿದ್ದಾರೆ.</p>.<p>‘ಹೊಸ ಆದೇಶದಂತೆ ಜಲಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಖರೀದಿಸಲಾಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಯೇ ಪ್ರಾರಂಭಿಕ ಪ್ರಮಾಣಪತ್ರಗಳ (ಸಿ.ಸಿ) ವಿತರಣೆ ಮಾಡಲಾಗುತ್ತಿದೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಎರಡು ಸ್ಥಳೀಯ ಸಂಸ್ಥೆಗಳು ಸೇರಿ ಕೈಗೊಂಡಿರುವ ಈ ನಿರ್ಧಾರದಿಂದ ಅಂತರ್ಜಲ ಮತ್ತು ಕಾವೇರಿ ನೀರನ್ನು ಸಂರಕ್ಷಿಸಲು ಸಾಧ್ಯವಾಗಲಿದೆ. ಈ ನೀರನ್ನು ಅಗತ್ಯ ಇರುವ ಕಡೆಗೆ ಬಳಸಿಕೊಳ್ಳಬಹುದು’ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದರು.</p>.<p>‘ಬಿಬಿಎಂಪಿ ನೀಡಿರುವ ಸಹಕಾರದಿಂದ ಕುಡಿಯುವ ನೀರಿನ ಉಳಿತಾಯಕ್ಕೆ ಸಹಕಾರಿಯಾಗಲಿದೆ’ ಎಂದು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಹೇಳಿದರು.</p>.<p>ಜಲ ಮಂಡಳಿಯ ಅಂಕಿ–ಅಂಶಗಳ ಪ್ರಕಾರ, ನಗರದಲ್ಲಿ ಜಲಮಂಡಳಿಯ 16 ಒಳಚರಂಡಿ ಸಂಸ್ಕರಣಾ ಘಟಕಗಳಿದ್ದು (ಎಸ್ಟಿಪಿ), ಈ ಪೈಕಿ 9 ಎಸ್ಟಿಪಿಗಳಲ್ಲಿ 27.1 ದಶಲಕ್ಷ ಲೀಟರ್ ನೀರನ್ನು ಸಂಸ್ಕರಿಸಲಾಗುತ್ತಿದೆ. ಈ ನೀರನ್ನು ಕಟ್ಟಡಗಳ ನಿರ್ಮಾಣ ಮತ್ತು ಇತರೆ ಕೆಲಸಕ್ಕೆ ಬಳಸಿದರೆ ಕಾವೇರಿ ನೀರಿನ ಮೇಲಿನ ಒತ್ತಡ ಕಡಿಮೆಯಾಗಲಿದೆ.</p>.<p>ಈ ಕುರಿತು ನಿಯಮ ಇಲ್ಲದ ಕಾರಣ ಕುಡಿಯಲು ಯೋಗ್ಯವಾದ ಅಂತರ್ಜಲ ಮತ್ತು ಕಾವೇರಿ ನೀರನ್ನೇ ಕಟ್ಟಡಗಳ ನಿರ್ಮಾಣಕ್ಕೆ ಬಳಸಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>